ಓದುಗರ ಪತ್ರ
ಮೈಸೂರಿನ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯ ಎನ್.ಆರ್.ಮೊಹಲ್ಲಾದ ಗಣೇಶ ನಗರದಲ್ಲಿರುವ ಹಿಂದೂ ರುದ್ರಭೂಮಿ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.
ರುದ್ರಭೂಮಿಯಲ್ಲಿ ಗಿಡಗಂಟಿಗಳು ಆಳೆತ್ತರ ಬೆಳೆದು ನಿಂತಿದ್ದು, ಶವ ಹೂಳುವವರು ಜಾಗಕ್ಕಾಗಿ ಪರದಾಡುವಂತಾಗಿದೆ. ಶವ ಸಂಸ್ಕಾರ ನಡೆಸಿದವರು ಚಟ್ಟ, ಮೃತರ ಹಾಸಿಗೆ, ಹೊದಿಕೆಗಳನ್ನು ಅರೆ ಬರೆ ಸುಟ್ಟು ಅಲ್ಲೇ ಬಿಸಾಡುವುದರಿಂದ ಕಾಲಿಡಲೂ ಜಾಗವಿಲ್ಲದಂತಾಗಿದೆ. ಜತೆಗೆ ರುದ್ರಭೂಮಿಗೆ ಸೆಕ್ಯೂರಿಟಿ ಗಾರ್ಡ್ ಇಲ್ಲದ್ದರಿಂದ ಮದ್ಯಪಾನ, ಇಸ್ಟೀಟ್ ಜೂಜು, ಮಾದಕ ಪದಾರ್ಥಗಳ ಸೇವನೆಯ ತಾಣವಾಗಿ ಮಾರ್ಪಟ್ಟಿದ್ದು, ರುದ್ರಭೂಮಿಯ ನಾಮ-ಲಕವೂ ಸ್ಪಷ್ಟವಾಗಿ ಕಾಣದಂತಿದೆ.
ಶವ ಸುಡುವ ಯಂತ್ರ ಸಮರ್ಪಕ ನಿರ್ವಹಣೆ ಇಲ್ಲದೇ ತುಕ್ಕು ಹಿಡಿದಿರುವುದರಿಂದ ಶವ ಸುಡಲು ಅವಕಾಶವಿಲ್ಲದಂತಾಗಿದೆ. ಸಂಬಂಧಪಟ್ಟವರು ಇತ್ತ ಗಮನಹರಿಸಿ ರುದ್ರಭೂಮಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕಾಗಿದೆ.
-ಕೆ.ಅಭಿನಂದ , ಎನ್.ಆರ್.ಮೊಹಲ್ಲಾ, ಮೈಸೂರು
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…