Andolana originals

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ತಾಂತ್ರಿಕ ಶಿಕ್ಷಣ)ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುವುದೆಂದು ಘೋಷಿಸಿರುವುದು ಶ್ಲಾಘನೀಯ.

ಪ್ರಸ್ತುತ ದೇಶದಲ್ಲಿ ಅತ್ಯಂತ ದುಬಾರಿಯಾಗಿರುವ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಪರಿವರ್ತಿಸಿ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮವಾದ ಆರೋಗ್ಯ ಸೌಲಭ್ಯವನ್ನು ಕಡಿಮೆ ವೆಚ್ಚದಲ್ಲಿ ದೊರಕಿಸಿಕೊಡಬೇಕು ಎಂಬುದು ಎಲ್ಲರ ಬೇಡಿಕೆ. ಇನ್ನು ಮುಂದಾದರೂ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಯೋಚಿಸಿ ಶಿಕ್ಷಣ ನೀತಿಯನ್ನು ಮಾರ್ಪಾಡು ಮಾಡಿ ಉಚಿತವಾದ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಸರ್ವರಿಗೂ ಕಲ್ಪಿಸುವುದು ಅತ್ಯಗತ್ಯ.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

1 hour ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

1 hour ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

1 hour ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

1 hour ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

2 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

2 hours ago