ಓದುಗರ ಪತ್ರ
ಕರ್ನಾಟಕದ ತೋತಾಪುರಿ ಮಾವು ಖರೀದಿಸದಂತೆ ಆಂಧ್ರಪ್ರದೇಶ ಸರ್ಕಾರ ನಿಷೇಧ ಹೇರಿದೆ.ಎರಡೂ ರಾಜ್ಯಗಳ ಗಡಿಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಪೊಲೀಸರು, ಅರಣ್ಯ ಅಧಿಕಾರಿಗಳು, ಕೃಷಿ ಮಾರುಕಟ್ಟೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳನ್ನು ನಿಯೋಜಿಸಿದೆ.ಕರ್ನಾಟಕದ ಮಾವು ಮಾರುಕಟ್ಟೆಗೆ ಬಂದರೆ, ಆಂಧ್ರ ಪ್ರದೇಶದ ರೈತರು ಬೆಳೆದ ಮಾವಿಗೆ ಬೆಲೆ ಕಡಿಮೆಯಾಗುತ್ತದೆ ಎನ್ನುವ ಕಾರಣ ನೀಡಿ ಕರ್ನಾಟಕದ ರೈತರು ಬೆಳೆದ ಮಾವು ಉತ್ಪನ್ನವನ್ನು ನಿರ್ಬಂಧಿಸಿದೆ.
ಈ ನಿರ್ಬಂಧವನ್ನು ತೆರೆವುಗೊಳಿಸುವಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದರೂ ಅದನ್ನು ಪರಿಗಣಿಸಿಲ್ಲ. ಇದು ನಿಜಕ್ಕೂ ಖಂಡನಾರ್ಹ. ಯಾವುದೇ ಉತ್ಪನ್ನಗಳನ್ನು ದೇಶದ ಎಲ್ಲಿ ಬೇಕಾದರೂ ಮಾರಾಟ ಮಾಡಲು ರೈತರಿಗೆ ಸ್ವಾತಂತ್ರ್ಯವಿದೆ.ಹೀಗಿರುವಾಗ ಆಂಧ್ರದ ನಿರ್ಬಂಧ ಕರ್ನಾಟಕದ ರೈತರಿಗೆ ಮಾರಕವಾಗಿದೆ. ಕೂಡಲೇ ನಿರ್ಬಂಧ ಹಿಂಪಡೆಯಬೇಕು. ಇಲ್ಲದಿದ್ದರೆ ಕರ್ನಾಟಕ ಕೂಡ ಆಂಧ್ರದ ಉತ್ಪನ್ನಗಳ ವಿರುದ್ಧ ಇದೇ ನೀತಿಯನ್ನು ಜಾರಿ ಮಾಡಬೇಕು. ಸುಪ್ರೀಂಕೋರ್ಟ್ ಆದೇಶ, ನ್ಯಾಯ ಮಂಡಳಿ, ಕಾವೇರಿ ಉಸ್ತುವಾರಿ ಸಮಿತಿಯ ಆದೇಶ ಪಾಲನೆ ಮಾಡದಿದ್ದರೆ ಒಕ್ಕೂಟ ವ್ಯವಸ್ಥೆಗೆ ಮಾರಕ ಎನ್ನುವವರಿಗೆ ಇಂತಹ ನಿರ್ಬಂಧಗಳು ಮಾರಕ ಅನಿಸುವುದಿಲ್ಲವೇ? ಕರ್ನಾಟಕ ಕೂಡ ತನ್ನ ನಿಲುವುಗಳಲ್ಲಿ ಬದಲಾವಣೆ ಮಾಡಿಕೊಳ್ಳುವುದು ಸೂಕ್ತ.
-ಮುಳ್ಳೂರು ಪ್ರಕಾಶ್,ಕನಕದಾಸನಗರ, ಮೈಸೂರು
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…