Andolana originals

ಓದುಗರ ಪತ್ರ: ಕರ್ನಾಟಕದ ಮಾವಿಗೆ ಆಂಧ್ರ ಪ್ರದೇಶ ನಿರ್ಬಂಧ ಹೇರಿರುವುದು ಖಂಡನಾರ್ಹ

ಕರ್ನಾಟಕದ ತೋತಾಪುರಿ ಮಾವು ಖರೀದಿಸದಂತೆ ಆಂಧ್ರಪ್ರದೇಶ ಸರ್ಕಾರ ನಿಷೇಧ ಹೇರಿದೆ.ಎರಡೂ ರಾಜ್ಯಗಳ ಗಡಿಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಪೊಲೀಸರು, ಅರಣ್ಯ ಅಧಿಕಾರಿಗಳು, ಕೃಷಿ ಮಾರುಕಟ್ಟೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳನ್ನು ನಿಯೋಜಿಸಿದೆ.ಕರ್ನಾಟಕದ ಮಾವು ಮಾರುಕಟ್ಟೆಗೆ ಬಂದರೆ, ಆಂಧ್ರ ಪ್ರದೇಶದ ರೈತರು ಬೆಳೆದ ಮಾವಿಗೆ ಬೆಲೆ ಕಡಿಮೆಯಾಗುತ್ತದೆ ಎನ್ನುವ ಕಾರಣ ನೀಡಿ ಕರ್ನಾಟಕದ ರೈತರು ಬೆಳೆದ ಮಾವು ಉತ್ಪನ್ನವನ್ನು ನಿರ್ಬಂಧಿಸಿದೆ.

ಈ ನಿರ್ಬಂಧವನ್ನು ತೆರೆವುಗೊಳಿಸುವಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದರೂ ಅದನ್ನು ಪರಿಗಣಿಸಿಲ್ಲ. ಇದು ನಿಜಕ್ಕೂ ಖಂಡನಾರ್ಹ. ಯಾವುದೇ ಉತ್ಪನ್ನಗಳನ್ನು ದೇಶದ ಎಲ್ಲಿ ಬೇಕಾದರೂ ಮಾರಾಟ ಮಾಡಲು ರೈತರಿಗೆ ಸ್ವಾತಂತ್ರ್ಯವಿದೆ.ಹೀಗಿರುವಾಗ ಆಂಧ್ರದ ನಿರ್ಬಂಧ ಕರ್ನಾಟಕದ ರೈತರಿಗೆ ಮಾರಕವಾಗಿದೆ. ಕೂಡಲೇ ನಿರ್ಬಂಧ ಹಿಂಪಡೆಯಬೇಕು. ಇಲ್ಲದಿದ್ದರೆ ಕರ್ನಾಟಕ ಕೂಡ ಆಂಧ್ರದ ಉತ್ಪನ್ನಗಳ ವಿರುದ್ಧ ಇದೇ ನೀತಿಯನ್ನು ಜಾರಿ ಮಾಡಬೇಕು. ಸುಪ್ರೀಂಕೋರ್ಟ್ ಆದೇಶ, ನ್ಯಾಯ ಮಂಡಳಿ, ಕಾವೇರಿ ಉಸ್ತುವಾರಿ ಸಮಿತಿಯ ಆದೇಶ ಪಾಲನೆ ಮಾಡದಿದ್ದರೆ ಒಕ್ಕೂಟ ವ್ಯವಸ್ಥೆಗೆ ಮಾರಕ ಎನ್ನುವವರಿಗೆ ಇಂತಹ ನಿರ್ಬಂಧಗಳು ಮಾರಕ ಅನಿಸುವುದಿಲ್ಲವೇ? ಕರ್ನಾಟಕ ಕೂಡ ತನ್ನ ನಿಲುವುಗಳಲ್ಲಿ ಬದಲಾವಣೆ ಮಾಡಿಕೊಳ್ಳುವುದು ಸೂಕ್ತ.

-ಮುಳ್ಳೂರು ಪ್ರಕಾಶ್,ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

1 hour ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

2 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

9 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

11 hours ago