ಓದುಗರ ಪತ್ರ
ಕರ್ನಾಟಕದ ತೋತಾಪುರಿ ಮಾವು ಖರೀದಿಸದಂತೆ ಆಂಧ್ರಪ್ರದೇಶ ಸರ್ಕಾರ ನಿಷೇಧ ಹೇರಿದೆ.ಎರಡೂ ರಾಜ್ಯಗಳ ಗಡಿಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಪೊಲೀಸರು, ಅರಣ್ಯ ಅಧಿಕಾರಿಗಳು, ಕೃಷಿ ಮಾರುಕಟ್ಟೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳನ್ನು ನಿಯೋಜಿಸಿದೆ.ಕರ್ನಾಟಕದ ಮಾವು ಮಾರುಕಟ್ಟೆಗೆ ಬಂದರೆ, ಆಂಧ್ರ ಪ್ರದೇಶದ ರೈತರು ಬೆಳೆದ ಮಾವಿಗೆ ಬೆಲೆ ಕಡಿಮೆಯಾಗುತ್ತದೆ ಎನ್ನುವ ಕಾರಣ ನೀಡಿ ಕರ್ನಾಟಕದ ರೈತರು ಬೆಳೆದ ಮಾವು ಉತ್ಪನ್ನವನ್ನು ನಿರ್ಬಂಧಿಸಿದೆ.
ಈ ನಿರ್ಬಂಧವನ್ನು ತೆರೆವುಗೊಳಿಸುವಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದರೂ ಅದನ್ನು ಪರಿಗಣಿಸಿಲ್ಲ. ಇದು ನಿಜಕ್ಕೂ ಖಂಡನಾರ್ಹ. ಯಾವುದೇ ಉತ್ಪನ್ನಗಳನ್ನು ದೇಶದ ಎಲ್ಲಿ ಬೇಕಾದರೂ ಮಾರಾಟ ಮಾಡಲು ರೈತರಿಗೆ ಸ್ವಾತಂತ್ರ್ಯವಿದೆ.ಹೀಗಿರುವಾಗ ಆಂಧ್ರದ ನಿರ್ಬಂಧ ಕರ್ನಾಟಕದ ರೈತರಿಗೆ ಮಾರಕವಾಗಿದೆ. ಕೂಡಲೇ ನಿರ್ಬಂಧ ಹಿಂಪಡೆಯಬೇಕು. ಇಲ್ಲದಿದ್ದರೆ ಕರ್ನಾಟಕ ಕೂಡ ಆಂಧ್ರದ ಉತ್ಪನ್ನಗಳ ವಿರುದ್ಧ ಇದೇ ನೀತಿಯನ್ನು ಜಾರಿ ಮಾಡಬೇಕು. ಸುಪ್ರೀಂಕೋರ್ಟ್ ಆದೇಶ, ನ್ಯಾಯ ಮಂಡಳಿ, ಕಾವೇರಿ ಉಸ್ತುವಾರಿ ಸಮಿತಿಯ ಆದೇಶ ಪಾಲನೆ ಮಾಡದಿದ್ದರೆ ಒಕ್ಕೂಟ ವ್ಯವಸ್ಥೆಗೆ ಮಾರಕ ಎನ್ನುವವರಿಗೆ ಇಂತಹ ನಿರ್ಬಂಧಗಳು ಮಾರಕ ಅನಿಸುವುದಿಲ್ಲವೇ? ಕರ್ನಾಟಕ ಕೂಡ ತನ್ನ ನಿಲುವುಗಳಲ್ಲಿ ಬದಲಾವಣೆ ಮಾಡಿಕೊಳ್ಳುವುದು ಸೂಕ್ತ.
-ಮುಳ್ಳೂರು ಪ್ರಕಾಶ್,ಕನಕದಾಸನಗರ, ಮೈಸೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…