Andolana originals

ಓದುಗರ ಪತ್ರ: ಕ್ಯಾಬ್ ಚಾಲಕರಿಂದ ಪ್ರಯಾಣಿಕರ ಸುಲಿಗೆ

ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದಲ್ಲಿ ಆಪ್ ಆಧಾರಿತ ಕ್ಯಾಬ್ ಚಾಲಕರು ಇಂಧನ ಬೆಲೆ ಹೆಚ್ಚಳ ನೆಪವೊಡ್ಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದಾರೆ. ಕ್ಯಾಬ್ ಬುಕ್ ಮಾಡಿದರೆ ಪ್ರಯಾಣಿಕರಿಗೆ ಕರೆ ಮಾಡುವ ಚಾಲಕರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ. ಸಮೀಪವೇ ಇದ್ದರೆ ರೈಡ್ ಕ್ಯಾನ್ಸಲ್ ಮಾಡುತ್ತಾರೆ. ಇಲ್ಲದಿದ್ದರೆ ಕನಿಷ್ಠ ೧೦೦ ರೂ. ನೀಡಬೇಕು ಎಂದು ತಾಕೀತು ಮಾಡುತ್ತಾರೆ. ಆಪ್‌ನಲ್ಲಿ ೭೦ ರೂ. ತೋರಿಸುತ್ತಿದ್ದರೂ ೧೦೦ ರೂ. ಕೊಡಿ ಎನ್ನುತ್ತಾರೆ. ಈ ಬಗ್ಗೆ ಸಂಬಂಧಪಟ್ಟ ಕಂಪೆನಿಗಳನ್ನು ಕೇಳಿ ಎಂದರೆ ನಾವೇಕೆ ಕೇಳಬೇಕು ಎನ್ನುತ್ತಾರೆ. ಪ್ರಯಾಣದ ದರ ೧೦೦ ರೂ. ಮೀರಿದರೆ ಇನ್ನೂ ಹೆಚ್ಚು ಹಣವನ್ನು ಕೊಡಬೇಕು ಎಂದು ವಿತಂಡವಾದ ಮಾಡುತ್ತಾರೆ. ಸಂಬಂಧಪಟ್ಟವರು ಈಗಲಾದರೂ ಪ್ರಯಾಣಿಕರ ಸುಲಿಗೆ ಮಾಡುತ್ತಿರುವ ಆಪ್ ಆಧಾರಿತ ಕ್ಯಾಬ್ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಪ್ರಯಾಣಿಕರ ಹಿತವನ್ನು ಕಾಪಾಡಬೇಕಾಗಿದೆ.

– ಮಹತಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

2 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

6 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

6 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

6 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

6 hours ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

6 hours ago