ಓದುಗರ ಪತ್ರ
ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ ಪೈಪ್ಗಳನ್ನು ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಪೈಪ್ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್ ಹಾಕದೇ ಇರುವುದರಿಂದ ಮಳೆಗಾಲದಲ್ಲಿ ಕೆಲಸರು ಹಾಗೂ ಬೇಸಿಗೆಯಲ್ಲಿ ದೂಳಿನಿಂದ ಸಾರ್ವಜನಿಕರು ಪರಿತಪಿಸುವಂತಾಗಿದೆ.
ರಾಮಕೃಷ್ಣನಗರ ಜಿ ಬ್ಲಾಕ್ನಲ್ಲಿ ಇರುವ ಗಣಪತಿ ದೇವಸ್ಥಾನದಿಂದ ಹಿಡಿದು ಕುವೆಂಪುನಗರ ಪೊಲೀಸ್ ಠಾಣೆಯವರೆಗೂ ರಸ್ತೆಯು ಹಳ್ಳಗಳಿಂದ ಕೂಡಿದೆ, ಇಂತಹ ರಸ್ತೆಯಲ್ಲಿ ಒಂದು ಬಸ್ಸು ಬಂದರೆ ಸಾಕು ರಸ್ತೆಯೇ ಕಾಣಿಸದಷ್ಟು ದೂಳು ಆವರಿಸುತ್ತದೆ.
ದ್ವಿಚಕ್ರ ವಾಹನಗಳು ಸವಾರರಂತೂ ಒಂದು ಕೈಯಲ್ಲಿ ಮೂಗನ್ನು ಮುಚ್ಚಿಕೊಂಡು, ಮತ್ತೊಂದು ಕೈಯಲ್ಲಿ ವಾಹನ ಚಲಾಯಿಸುತ್ತಾರೆ. ದೂಳಿನಿಂದಾಗಿ ಸಾರ್ವಜನಿಕರಿಗೆ ಉಸಿರಾಟದ ಸಮಸ್ಯೆ ಕಾಡುತ್ತಿದ್ದು, ರಸ್ತೆಯಲ್ಲಿ ಓಡಾಡುವ ಪದಚಾರಿಗಳು ಮಾಸ್ಕನ್ನು ಕಡ್ಡಾಯವಾಗಿ ಬಳಸುವುದು ಅನಿವಾರ್ಯವಾಗಿದೆ. ಸಂಬಂಧಪಟ್ಟವರು ರಸ್ತೆಗೆ ಡಾಂಬರು ಹಾಕಿಸುವ ಮೂಲಕ ಸಾರ್ವಜನಿಕರ ಹಿತ ಕಾಪಾಡಬೇಕಾಗಿದೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…