ಓದುಗರ ಪತ್ರ
ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದಲ್ಲಿ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಿಕ್ಕೂಸನಾಯಕ ಅವರು ಸಕಾಲಕ್ಕೆ ಸಂಬಳ ಸಿಗದೇ ಆತ್ಮಹತ್ಯೆ ಮಾಡಿಕೊಂಡಿದ್ದು, ಬೇಸರದ ಸಂಗತಿಯಾಗಿದೆ.
ಕಳೆದ ೨೭ ತಿಂಗಳುಗಳಿಂದ ಸಂಬಳವಿಲ್ಲದೇ ಸಂಕಷ್ಟಕ್ಕೊಳಗಾಗಿದ್ದರು ಎನ್ನಲಾಗಿದ್ದು, ಅವರ ಕುಟುಂಬದವರು ಮುಂದಿನ ದಾರಿ ಕಾಣದೇ ಕಂಗಾಲಾಗಿದ್ದಾರೆ. ಉದ್ಯೋಗಿಗಳಿಗೆ ಸಂಬಳ ಒಂದೆರಡು ದಿನ ತಡವಾದರೂ ಚಡಪಡಿಸುವಂತಾಗುತ್ತದೆ. ಆದರೆ ೨೭ ತಿಂಗಳುಗಳಿಂದ ವೇತನ ಇಲ್ಲದೆ ಸಂಸಾರ ನಡೆಸಲು ಎಂತಹ ವಿಷಮ ಪರಿಸ್ಥಿತಿ ಅವರಿಗೆ ಎದುರಾಗಿರಬಹುದು ಎಂಬುದನ್ನು ಊಹಿಸಿಕೊಳ್ಳ ಬಹುದಾಗಿದೆ. ಸಂಬಂಧಪಟ್ಟವರು ಇನ್ನು ಮುಂದಾದರೂ ಗ್ರಾಮ ಪಂಚಾಯಿತಿ ಮಟ್ಟದ ಸರ್ಕಾರಿ ನೌಕರರಿಗೆ ಸಕಾಲಕ್ಕೆ ವೇತನ ಪಾವತಿಸುವ ಮೂಲಕ ಇಂತಹ ಅನಾಹುತಗಳಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.
-ವಿಜಯ್ ಹೆಮ್ಮಿಗೆ , ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…