Andolana originals

ಓದುಗರ ಪತ್ರ: ಸಾಹಿತ್ಯ ಕ್ಷೇತ್ರದವರೇ ಸಮ್ಮೇಳನಾಧ್ಯಕ್ಷರಾಗಲಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಡಿಸೆಂಬರ್.20ರಿಂದ 23ರವರೆಗೆ ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಈ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತ್ಯ ಕ್ಷೇತ್ರದ ಹೊರತಾಗಿ ಭಿನ್ನ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ.

ಇಲ್ಲಿಯವರೆಗೂ ಕನ್ನಡ ಸಾಹಿತ್ಯ ಸಮ್ಮೇಳನಗಳ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಆಯ್ಕೆ ಮಾಡುತ್ತಾ ಬರಲಾಗಿದೆ. ಆದರೆ ಈ ಬಾರಿ ಸಾಹಿತ್ಯೇತರ ಸಾಧಕರಿಗೆ ಸಮ್ಮೇಳನಾಧ್ಯಕ್ಷ ಪಟ್ಟ ನೀಡಬೇಕು ಎನ್ನುವವರ ಉದ್ದೇಶವೇನು ಎಂಬುದೇ ತಿಳಿಯದಾಗಿದೆ.

ಸಾಹಿತ್ಯೇತರ ಕ್ಷೇತ್ರದ ಸಾಧಕರನ್ನು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಮಾಡುವುದರಿಂದ ಸಾಹಿತ್ಯ ಕ್ಷೇತ್ರವನ್ನು ಅಪವಿತ್ರಗೊಳಿಸುವ ಜತೆಗೆ ಭಿನ್ನ ಕ್ಷೇತ್ರದ ಸಾಧಕರನ್ನು ಕನ್ನಡದ ತೇರಿನಲ್ಲಿ ಕೂರಿಸಿ ಎಳೆಯುವುದು ಕೆಟ್ಟ ಪರಂಪರೆಗೆ ದಾರಿ ಮಾಡಿಕೊಡಬಹುದು.

ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯೇತರ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡಬೇಕು ಎಂಬ ವಿಚಾರವನ್ನು ಮೊದಲು ಪ್ರಸ್ತಾಪಿಸಿದ್ದು ಕಸಾಪ ಅಧ್ಯಕ್ಷ ಮಹೇಶ್‌ ಜೋಶಿಯವರು. ಇಂತಹ ಬೆಳವಣಿಗೆಗಳು ಮುಂದೊಂದು ದಿನ ಸಾಹಿತ್ಯ ಕ್ಷೇತ್ರದಲ್ಲಿಯೂ ರಾಜಕೀಯ ತಂತ್ರಗಾರಿಕೆಗಳು ಚುರುಕಾಗಲು ಕಾರಣವಾಗಬಹುದು.

ಮಹೇಶ್‌ ಜೋಶಿಯವರು ಮೊದಲು ಕನ್ನಡ ಸಾಹಿತ್ಯ ಸಮ್ಮೇಳನಗಳ ಧೈಯೋದ್ದೇಶಗಳೇನು ಎಂಬುದನ್ನು ತಿಳಿದುಕೊಳ್ಳಲಿ, ಸಾಹಿತ್ಯೇತರ ಕ್ಷೇತ್ರದ ಸಾಧಕರು ಕನ್ನಡ ಸಾಹಿತಿ ಸಮ್ಮೇಳನಗಳ ಅಧ್ಯಕ್ಷರಾದರೆ ಅದನ್ನು ಸಾಹಿತ್ಯ ಸಮ್ಮೇಳನ ಎನ್ನಲು ಸಾಧ್ಯವೇ? ಕಸಾಪ ಈ ಬಗ್ಗೆ ಚಿಂತಿಸಿ ಸಾಹಿತ್ಯ ಕ್ಷೇತ್ರದ ಸಾಧಕರನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago