Andolana originals

ಓದುಗರ ಪತ್ರ: ಸಾಹಿತ್ಯ ಕ್ಷೇತ್ರದವರೇ ಸಮ್ಮೇಳನಾಧ್ಯಕ್ಷರಾಗಲಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಡಿಸೆಂಬರ್.20ರಿಂದ 23ರವರೆಗೆ ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಈ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತ್ಯ ಕ್ಷೇತ್ರದ ಹೊರತಾಗಿ ಭಿನ್ನ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ.

ಇಲ್ಲಿಯವರೆಗೂ ಕನ್ನಡ ಸಾಹಿತ್ಯ ಸಮ್ಮೇಳನಗಳ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಆಯ್ಕೆ ಮಾಡುತ್ತಾ ಬರಲಾಗಿದೆ. ಆದರೆ ಈ ಬಾರಿ ಸಾಹಿತ್ಯೇತರ ಸಾಧಕರಿಗೆ ಸಮ್ಮೇಳನಾಧ್ಯಕ್ಷ ಪಟ್ಟ ನೀಡಬೇಕು ಎನ್ನುವವರ ಉದ್ದೇಶವೇನು ಎಂಬುದೇ ತಿಳಿಯದಾಗಿದೆ.

ಸಾಹಿತ್ಯೇತರ ಕ್ಷೇತ್ರದ ಸಾಧಕರನ್ನು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಮಾಡುವುದರಿಂದ ಸಾಹಿತ್ಯ ಕ್ಷೇತ್ರವನ್ನು ಅಪವಿತ್ರಗೊಳಿಸುವ ಜತೆಗೆ ಭಿನ್ನ ಕ್ಷೇತ್ರದ ಸಾಧಕರನ್ನು ಕನ್ನಡದ ತೇರಿನಲ್ಲಿ ಕೂರಿಸಿ ಎಳೆಯುವುದು ಕೆಟ್ಟ ಪರಂಪರೆಗೆ ದಾರಿ ಮಾಡಿಕೊಡಬಹುದು.

ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯೇತರ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡಬೇಕು ಎಂಬ ವಿಚಾರವನ್ನು ಮೊದಲು ಪ್ರಸ್ತಾಪಿಸಿದ್ದು ಕಸಾಪ ಅಧ್ಯಕ್ಷ ಮಹೇಶ್‌ ಜೋಶಿಯವರು. ಇಂತಹ ಬೆಳವಣಿಗೆಗಳು ಮುಂದೊಂದು ದಿನ ಸಾಹಿತ್ಯ ಕ್ಷೇತ್ರದಲ್ಲಿಯೂ ರಾಜಕೀಯ ತಂತ್ರಗಾರಿಕೆಗಳು ಚುರುಕಾಗಲು ಕಾರಣವಾಗಬಹುದು.

ಮಹೇಶ್‌ ಜೋಶಿಯವರು ಮೊದಲು ಕನ್ನಡ ಸಾಹಿತ್ಯ ಸಮ್ಮೇಳನಗಳ ಧೈಯೋದ್ದೇಶಗಳೇನು ಎಂಬುದನ್ನು ತಿಳಿದುಕೊಳ್ಳಲಿ, ಸಾಹಿತ್ಯೇತರ ಕ್ಷೇತ್ರದ ಸಾಧಕರು ಕನ್ನಡ ಸಾಹಿತಿ ಸಮ್ಮೇಳನಗಳ ಅಧ್ಯಕ್ಷರಾದರೆ ಅದನ್ನು ಸಾಹಿತ್ಯ ಸಮ್ಮೇಳನ ಎನ್ನಲು ಸಾಧ್ಯವೇ? ಕಸಾಪ ಈ ಬಗ್ಗೆ ಚಿಂತಿಸಿ ಸಾಹಿತ್ಯ ಕ್ಷೇತ್ರದ ಸಾಧಕರನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

20 mins ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

2 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

13 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

13 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

14 hours ago