ಓದುಗರ ಪತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ತಳುಕು ಹಾಕಿಕೊಂಡಿರುವ ಮುಡಾ ಹಗರಣ ಭಾರೀ ಸಂಚಲನ ಸೃಷ್ಟಿಸಿದ್ದು, ಊಹಿಸಲಾರದಷ್ಟರ ಮಟ್ಟಿಗೆ ಹಗರಣ ನಡೆದಿದೆ ಎನ್ನಲಾಗಿದೆ.
ಈ ಸಂಬಂಧ ಇ.ಡಿ. ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿ ನಡೆದಿರುವ ಹಗರಣವನ್ನು ನೋಡಿದರೆ ಪ್ರಭಾವಿಗಳೆಲ್ಲ ಒಟ್ಟಿಗೆ ಸೇರಿ ಮಾಡಿರುವುದು ತಿಳಿಯುತ್ತದೆ. ಬಡವರ್ಗದ ಜನರಿಗೆ ಸೇರಬೇಕಾದ ಕೋಟ್ಯಂತರ ರೂ. ಮೌಲ್ಯದ ನಿವೇಶನಗಳು ಭ್ರಷ್ಟ ರಾಜಕಾರಣಿಗಳ ಪಾಲಾಗಿರುವುದು ವಿಪರ್ಯಾಸ. ದಾಳಿ ವೇಳೆ ಮುಡಾ ಅಧಿಕಾರಿಗಳು ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಲು ತಡಬಡಾಯಿಸಿರುವುದಾಗಿಯೂ ವರದಿಯಾಗಿದೆ.
ಈ ಹಗರಣದಲ್ಲಿ ಪ್ರಭಾವಿಗಳು ಭಾಗಿಯಾಗಿರುವುದರಿಂದ ಇದರ ತನಿಖೆಯ ಸತ್ಯಾಸತ್ಯತೆಗಳು ಜನರಿಗೂ ಗೊತ್ತಾಗಬೇಕು. ಆದ್ದರಿಂದ ತನಿಖಾ ಅಧಿಕಾರಿಗಳು ತಮ್ಮ ತನಿಖೆಯ ಅಂಶಗಳನ್ನು ಹಾಗೂ ಹಗರಣದಲ್ಲಿ ಸಿಲುಕಿಕೊಂಡಿರುವವರು ನೀಡುವ ಉತ್ತರಗಳನ್ನು ಯಥಾವತ್ತಾಗಿ ಮಾಧ್ಯಮಗಳ ಮೂಲಕ ಜನರಿಗೆ ಮುಟ್ಟಿಸಬೇಕು. ಮುಡಾ ಸ್ವಾಧೀನಕ್ಕೆ ಎಷ್ಟು ನಿವೇಶನಗಳು ಬರಬೇಕು, ಈವರೆಗೂ ಎಷ್ಟು ಅಕ್ರಮ ನಡೆದಿದೆ ಎಂಬುದರ ಮಾಹಿತಿಯನ್ನು ಅಧಿಕಾರಿಗಳು ಜನರ ಮುಂದೆ ತೆರೆದಿಡುವ ಜತೆಗೆ ಭ್ರಷ್ಟರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…