Andolana originals

ಓದುಗರ ಪತ್ರ: ತನಿಖೆಯ ಸತ್ಯಾಸತ್ಯತೆ ಜನರಿಗೂ ತಿಳಿಯಲಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ತಳುಕು ಹಾಕಿಕೊಂಡಿರುವ ಮುಡಾ ಹಗರಣ ಭಾರೀ ಸಂಚಲನ ಸೃಷ್ಟಿಸಿದ್ದು, ಊಹಿಸಲಾರದಷ್ಟರ ಮಟ್ಟಿಗೆ ಹಗರಣ ನಡೆದಿದೆ ಎನ್ನಲಾಗಿದೆ.

ಈ ಸಂಬಂಧ ಇ.ಡಿ. ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿ ನಡೆದಿರುವ ಹಗರಣವನ್ನು ನೋಡಿದರೆ ಪ್ರಭಾವಿಗಳೆಲ್ಲ ಒಟ್ಟಿಗೆ ಸೇರಿ ಮಾಡಿರುವುದು ತಿಳಿಯುತ್ತದೆ. ಬಡವರ್ಗದ ಜನರಿಗೆ ಸೇರಬೇಕಾದ ಕೋಟ್ಯಂತರ ರೂ. ಮೌಲ್ಯದ ನಿವೇಶನಗಳು ಭ್ರಷ್ಟ ರಾಜಕಾರಣಿಗಳ ಪಾಲಾಗಿರುವುದು ವಿಪರ್ಯಾಸ. ದಾಳಿ ವೇಳೆ ಮುಡಾ ಅಧಿಕಾರಿಗಳು ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಲು ತಡಬಡಾಯಿಸಿರುವುದಾಗಿಯೂ ವರದಿಯಾಗಿದೆ.
ಈ ಹಗರಣದಲ್ಲಿ ಪ್ರಭಾವಿಗಳು ಭಾಗಿಯಾಗಿರುವುದರಿಂದ ಇದರ ತನಿಖೆಯ ಸತ್ಯಾಸತ್ಯತೆಗಳು ಜನರಿಗೂ ಗೊತ್ತಾಗಬೇಕು. ಆದ್ದರಿಂದ ತನಿಖಾ ಅಧಿಕಾರಿಗಳು ತಮ್ಮ ತನಿಖೆಯ ಅಂಶಗಳನ್ನು ಹಾಗೂ ಹಗರಣದಲ್ಲಿ ಸಿಲುಕಿಕೊಂಡಿರುವವರು ನೀಡುವ ಉತ್ತರಗಳನ್ನು ಯಥಾವತ್ತಾಗಿ ಮಾಧ್ಯಮಗಳ ಮೂಲಕ ಜನರಿಗೆ ಮುಟ್ಟಿಸಬೇಕು. ಮುಡಾ ಸ್ವಾಧೀನಕ್ಕೆ ಎಷ್ಟು ನಿವೇಶನಗಳು ಬರಬೇಕು, ಈವರೆಗೂ ಎಷ್ಟು ಅಕ್ರಮ ನಡೆದಿದೆ ಎಂಬುದರ ಮಾಹಿತಿಯನ್ನು ಅಧಿಕಾರಿಗಳು ಜನರ ಮುಂದೆ ತೆರೆದಿಡುವ ಜತೆಗೆ ಭ್ರಷ್ಟರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.

-ಎ.ಎಸ್‌.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

5 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

6 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

6 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

6 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

7 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

7 hours ago