ಓದುಗರ ಪತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ತಳುಕು ಹಾಕಿಕೊಂಡಿರುವ ಮುಡಾ ಹಗರಣ ಭಾರೀ ಸಂಚಲನ ಸೃಷ್ಟಿಸಿದ್ದು, ಊಹಿಸಲಾರದಷ್ಟರ ಮಟ್ಟಿಗೆ ಹಗರಣ ನಡೆದಿದೆ ಎನ್ನಲಾಗಿದೆ.
ಈ ಸಂಬಂಧ ಇ.ಡಿ. ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿ ನಡೆದಿರುವ ಹಗರಣವನ್ನು ನೋಡಿದರೆ ಪ್ರಭಾವಿಗಳೆಲ್ಲ ಒಟ್ಟಿಗೆ ಸೇರಿ ಮಾಡಿರುವುದು ತಿಳಿಯುತ್ತದೆ. ಬಡವರ್ಗದ ಜನರಿಗೆ ಸೇರಬೇಕಾದ ಕೋಟ್ಯಂತರ ರೂ. ಮೌಲ್ಯದ ನಿವೇಶನಗಳು ಭ್ರಷ್ಟ ರಾಜಕಾರಣಿಗಳ ಪಾಲಾಗಿರುವುದು ವಿಪರ್ಯಾಸ. ದಾಳಿ ವೇಳೆ ಮುಡಾ ಅಧಿಕಾರಿಗಳು ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಲು ತಡಬಡಾಯಿಸಿರುವುದಾಗಿಯೂ ವರದಿಯಾಗಿದೆ.
ಈ ಹಗರಣದಲ್ಲಿ ಪ್ರಭಾವಿಗಳು ಭಾಗಿಯಾಗಿರುವುದರಿಂದ ಇದರ ತನಿಖೆಯ ಸತ್ಯಾಸತ್ಯತೆಗಳು ಜನರಿಗೂ ಗೊತ್ತಾಗಬೇಕು. ಆದ್ದರಿಂದ ತನಿಖಾ ಅಧಿಕಾರಿಗಳು ತಮ್ಮ ತನಿಖೆಯ ಅಂಶಗಳನ್ನು ಹಾಗೂ ಹಗರಣದಲ್ಲಿ ಸಿಲುಕಿಕೊಂಡಿರುವವರು ನೀಡುವ ಉತ್ತರಗಳನ್ನು ಯಥಾವತ್ತಾಗಿ ಮಾಧ್ಯಮಗಳ ಮೂಲಕ ಜನರಿಗೆ ಮುಟ್ಟಿಸಬೇಕು. ಮುಡಾ ಸ್ವಾಧೀನಕ್ಕೆ ಎಷ್ಟು ನಿವೇಶನಗಳು ಬರಬೇಕು, ಈವರೆಗೂ ಎಷ್ಟು ಅಕ್ರಮ ನಡೆದಿದೆ ಎಂಬುದರ ಮಾಹಿತಿಯನ್ನು ಅಧಿಕಾರಿಗಳು ಜನರ ಮುಂದೆ ತೆರೆದಿಡುವ ಜತೆಗೆ ಭ್ರಷ್ಟರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…