ಓದುಗರ ಪತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ತಳುಕು ಹಾಕಿಕೊಂಡಿರುವ ಮುಡಾ ಹಗರಣ ಭಾರೀ ಸಂಚಲನ ಸೃಷ್ಟಿಸಿದ್ದು, ಊಹಿಸಲಾರದಷ್ಟರ ಮಟ್ಟಿಗೆ ಹಗರಣ ನಡೆದಿದೆ ಎನ್ನಲಾಗಿದೆ.
ಈ ಸಂಬಂಧ ಇ.ಡಿ. ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿ ನಡೆದಿರುವ ಹಗರಣವನ್ನು ನೋಡಿದರೆ ಪ್ರಭಾವಿಗಳೆಲ್ಲ ಒಟ್ಟಿಗೆ ಸೇರಿ ಮಾಡಿರುವುದು ತಿಳಿಯುತ್ತದೆ. ಬಡವರ್ಗದ ಜನರಿಗೆ ಸೇರಬೇಕಾದ ಕೋಟ್ಯಂತರ ರೂ. ಮೌಲ್ಯದ ನಿವೇಶನಗಳು ಭ್ರಷ್ಟ ರಾಜಕಾರಣಿಗಳ ಪಾಲಾಗಿರುವುದು ವಿಪರ್ಯಾಸ. ದಾಳಿ ವೇಳೆ ಮುಡಾ ಅಧಿಕಾರಿಗಳು ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಲು ತಡಬಡಾಯಿಸಿರುವುದಾಗಿಯೂ ವರದಿಯಾಗಿದೆ.
ಈ ಹಗರಣದಲ್ಲಿ ಪ್ರಭಾವಿಗಳು ಭಾಗಿಯಾಗಿರುವುದರಿಂದ ಇದರ ತನಿಖೆಯ ಸತ್ಯಾಸತ್ಯತೆಗಳು ಜನರಿಗೂ ಗೊತ್ತಾಗಬೇಕು. ಆದ್ದರಿಂದ ತನಿಖಾ ಅಧಿಕಾರಿಗಳು ತಮ್ಮ ತನಿಖೆಯ ಅಂಶಗಳನ್ನು ಹಾಗೂ ಹಗರಣದಲ್ಲಿ ಸಿಲುಕಿಕೊಂಡಿರುವವರು ನೀಡುವ ಉತ್ತರಗಳನ್ನು ಯಥಾವತ್ತಾಗಿ ಮಾಧ್ಯಮಗಳ ಮೂಲಕ ಜನರಿಗೆ ಮುಟ್ಟಿಸಬೇಕು. ಮುಡಾ ಸ್ವಾಧೀನಕ್ಕೆ ಎಷ್ಟು ನಿವೇಶನಗಳು ಬರಬೇಕು, ಈವರೆಗೂ ಎಷ್ಟು ಅಕ್ರಮ ನಡೆದಿದೆ ಎಂಬುದರ ಮಾಹಿತಿಯನ್ನು ಅಧಿಕಾರಿಗಳು ಜನರ ಮುಂದೆ ತೆರೆದಿಡುವ ಜತೆಗೆ ಭ್ರಷ್ಟರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…