Andolana originals

ಓದುಗರ ಪತ್ರ: ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಗಳಾಗಲಿ

ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ ೯ರಿಂದ ನಡೆಯುತ್ತಿದ್ದು, ೧೦ ದಿನಗಳ ಕಾಲ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಗಳಾಗಬೇಕಿದೆ. ಇತ್ತೀಚಿನ ವರ್ಷಗಳಲ್ಲಿ ಅಧಿವೇಶನ ಎಂದರೆ ಅಲ್ಲಿ ಕೇವಲ ಗದ್ದಲ-ಗಲಾಟೆ ಎನ್ನುವಂತಾಗಿದೆ.

ವೈಯಕ್ತಿಕ ದ್ವೇಷದಿಂದಾಗಿ ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಂಡು ಅಧಿವೇಶನದಿಂದ ಬಹಿಷ್ಕಾರಗೊಳ್ಳುತ್ತಿದ್ದಾರೆ. ಎಷ್ಟೋ ಬಾರಿ ಶಾಸಕರು ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿರುವ ಉದಾಹರಣೆಗಳಿವೆ. ಬೆಳಗಾವಿ ಯಲ್ಲಿ ನಡೆಯುತ್ತಿರುವ ಅಧಿವೇಶನವನ್ನು ಜನರು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸುತ್ತಿರುತ್ತಾರೆ. ನಾವು ಆರಿಸಿ ಕಳುಹಿಸಿರುವ ನಮ್ಮ ಶಾಸಕರು ನಮ್ಮ ಭಾಗದ ಸಮಸ್ಯೆಗಳನ್ನು ಪ್ರಸ್ತಾಪಿಸಿ ಪರಿಹಾರಕ್ಕಾಗಿ ಆಗ್ರಹಿಸುತ್ತಾರೆ ಎಂಬ ನಂಬಿಕೆಯಲ್ಲಿರುತ್ತಾರೆ.

ಆದರೆ ಅಧಿವೇಶನದಲ್ಲಿ ಶಾಸಕರ ವರ್ತನೆ ಅವರ ನಂಬಿಕೆಯನ್ನು ಹುಸಿಯಾಗಿಸುತ್ತಿದ್ದು, ಇದು ಅಧಿವೇಶನವೋ ಇಲ್ಲ ಮಾರುಕಟ್ಟೆಯೋ ಎಂದುಕೊಳ್ಳು ವಂತಾಗಿದೆ. ಆದ್ದರಿಂದ ಈ ಬಾರಿಯಾದರೂ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಗಳಾಗಿ, ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಬೆಳಗಾವಿಯಲ್ಲಿ ವರ್ಷಕ್ಕೊಮ್ಮೆ ಅಧಿವೇಶನ ನಡೆಸುವುದೇ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚಿಸುವುದಕ್ಕಾಗಿ, ಚರ್ಚಿಸಿ ಆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕಾಗಿ. ಹಾಗಾದಾಗ ಮಾತ್ರ ಬೆಳಗಾವಿಯ ಅಧಿವೇಶನಕ್ಕೂ ಒಂದು ಅರ್ಥ ಬರುವುದು. ಆದ್ದರಿಂದ ಆಡಳಿತಾರೂಢ ಪಕ್ಷ ಮತ್ತು ವಿಪಕ್ಷಗಳು ತಂತ್ರ ಕಾರ್ಯತಂತ್ರಗಳನ್ನು ರೂಪಿಸಿಕೊಂಡು ಪರಸ್ಪರ ಕಾಲು ಎಳೆದುಕೊಳ್ಳುವ ಬದಲು ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಲಿ.

-ಎನ್. ಪಿ. ಪರಶಿವಮೂರ್ತಿ, ನಂಜೀಪುರ, ಸರಗೂರು ತಾ

andolana

Recent Posts

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

17 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

31 mins ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

43 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

58 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

1 hour ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago