Mysore
22
overcast clouds

Social Media

ಮಂಗಳವಾರ, 11 ಆಗಸ್ಟ್ 2026
Light
Dark

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮೈಸೂರು ಭಾಗದ ಪ್ರಭಾವಿ ನಾಯಕ, ಆರು ಬಾರಿ ಶಾಸಕರಾಗಿರುವ ತನ್ವೀರ್‌ಸೇಠ್ ಅವರೂ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ. ಕಾನೂನು ಸಚಿವರಾಗಿದ್ದ ಹೆಚ್. ಕೆ. ಪಾಟೀಲ್ ಅವರೂ ಅವಕಾಶದಿಂದ ವಂಚಿತರಾಗಿದ್ದಾರೆ.

ಕೆಲವು ಜಿಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯವೇ ಇಲ್ಲ. ಸಚಿವ ಸಂಪುಟದ ವಿಸ್ತರಣೆಯಿಂದ ಅನೇಕ ಶಾಸಕರು ಅಸಮಾಧಾನ ಗೊಂಡಿರುವುದು ಜಗಜ್ಜಾಹೀರಾಗಿದೆ. ರಾಜ್ಯ ಸಚಿವ ಸಂಪುಟದ ವಿಸ್ತರಣೆಯಿಂದ ರಾಜಕೀಯ ಸಮಸ್ಯೆಗಳು ಉದ್ಭವಿಸಿವೆ. ಈ ಗದ್ದಲದ ಮುಂದೆ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಗೌಣವಾಗಬಾರದು.

-ಕೆ.ವಿ.ವಾಸು

Tags:
error: Content is protected !!