ಓದುಗರ ಪತ್ರ
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ ಕಾರಣವಾಗಿದೆ. ಆದರೆ ಕೆಲ ದಿನಗಳ ಹಿಂದೆ ಹುಲಿ ದಾಳಿಯಿಂದ ಮೂವರು ಮೃತಪಟ್ಟು,ಮತ್ತೊಬ್ಬರು ಎರಡು ಕಣ್ಣುಗಳನ್ನೂ ಕಳೆದುಕೊಂಡಿದ್ದಾರೆ. ಕಾಡು ಪ್ರಾಣಿಗಳ ದಾಳಿಯಿಂದ ತಾಲ್ಲೂಕಿನ ಗ್ರಾಮೀಣ ಭಾಗದ ರೈತರ ಸಾಕು ಪ್ರಾಣಿಗಳ ಜೀವಹಾನಿಯೂ ಆಗಿದೆ. ಕಬಿನಿ ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಕ್ರಮ ರೆಸಾರ್ಟ್ಗಳಲ್ಲಿ ನಡೆಯುವ ಪ್ರವಾಸಿಗರ ಮಿತಿ ಮೀರಿದ ಚಟುವಟಿಕೆಗಳಿಂದ ಕಾಡು ಪ್ರಾಣಿಗಳು, ಹುಲಿಗಳು,ಆನೆಗಳು ನಾಡಿನತ್ತ ಮುಖ ಮಾಡಿ ಪ್ರಾಣ ಹಾನಿ,ಬೆಳೆ ಹಾನಿ ಉಂಟು ಮಾಡುತ್ತಿವೆ. ಅಕ್ರಮ ರೆಸಾರ್ಟ್ಗಳ ವಿರುದ್ಧ ರೈತರು ಮತ್ತು ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ೨-೩ತಿಂಗಳುಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿಯನ್ನು ಸ್ಥಗಿತಗೊಳಿಸಿತ್ತು. ಆದರೆ ಪಟ್ಟಭದ್ರರ ಹಿತಾಸಕ್ತಿ,ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಇದೀಗ ಮತ್ತೆ ಸಫಾರಿ ಆರಂಭಕ್ಕೆ ಅನುಮತಿ ನೀಡಿದೆ. ರೈತ ಸಂಘಟನೆಗಳು, ಇತರ ಜನಪರಸಂಘಟನೆಗಳು, ಸ್ಥಳೀಯರು, ಪರಿಸರವಾದಿಗಳು, ಸೇವ್ ಕಬಿನಿ ತಂಡದ ಪದಾಧಿಕಾರಿಗಳ ಹೋರಾಟ, ವಿರೋಧದ ನಡುವೆಯೂ ಸಫಾರಿ ಆರಂಭಕ್ಕೆ ಅನುಮತಿಸಿರುವುದು ಖಂಡನೀಯ. ರೆಸಾರ್ಟ್ಗಳಿಂದ ಉಂಟಾಗುವ ಜನಜಂಗುಳಿ, ಮಾನವ ಚಟುವಟಿಕೆಗಳಿಂದ ವನ್ಯ ಪ್ರಾಣಿಗಳ ನೆಮ್ಮದಿಗೆ ಭಂಗ ಉಂಟು ಮಾಡಲು ಪ್ರೇರೇಪಣೆ ನೀಡಿರುವುದು ಸರ್ಕಾರದ ಬೇಜವಾಬ್ದಾರಿತನದ ಪರಮಾವಧಿಯಾಗಿದೆ. ಮತ್ತೆ ರೈತರ ಮೇಲೆ ವನ್ಯ ಪ್ರಾಣಿಗಳ ದಾಳಿ ನಡೆದರೆ ಇದಕ್ಕೆ ಸರ್ಕಾರ ದೊಡ್ಡ ಬೆಲೆ ತೆರಬೇಕಾಗುತ್ತದೆ.
– ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ. ತಾಲ್ಲೂಕು
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…