ಓದುಗರ ಪತ್ರ
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ ಕಾರಣವಾಗಿದೆ. ಆದರೆ ಕೆಲ ದಿನಗಳ ಹಿಂದೆ ಹುಲಿ ದಾಳಿಯಿಂದ ಮೂವರು ಮೃತಪಟ್ಟು,ಮತ್ತೊಬ್ಬರು ಎರಡು ಕಣ್ಣುಗಳನ್ನೂ ಕಳೆದುಕೊಂಡಿದ್ದಾರೆ. ಕಾಡು ಪ್ರಾಣಿಗಳ ದಾಳಿಯಿಂದ ತಾಲ್ಲೂಕಿನ ಗ್ರಾಮೀಣ ಭಾಗದ ರೈತರ ಸಾಕು ಪ್ರಾಣಿಗಳ ಜೀವಹಾನಿಯೂ ಆಗಿದೆ. ಕಬಿನಿ ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಕ್ರಮ ರೆಸಾರ್ಟ್ಗಳಲ್ಲಿ ನಡೆಯುವ ಪ್ರವಾಸಿಗರ ಮಿತಿ ಮೀರಿದ ಚಟುವಟಿಕೆಗಳಿಂದ ಕಾಡು ಪ್ರಾಣಿಗಳು, ಹುಲಿಗಳು,ಆನೆಗಳು ನಾಡಿನತ್ತ ಮುಖ ಮಾಡಿ ಪ್ರಾಣ ಹಾನಿ,ಬೆಳೆ ಹಾನಿ ಉಂಟು ಮಾಡುತ್ತಿವೆ. ಅಕ್ರಮ ರೆಸಾರ್ಟ್ಗಳ ವಿರುದ್ಧ ರೈತರು ಮತ್ತು ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ೨-೩ತಿಂಗಳುಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿಯನ್ನು ಸ್ಥಗಿತಗೊಳಿಸಿತ್ತು. ಆದರೆ ಪಟ್ಟಭದ್ರರ ಹಿತಾಸಕ್ತಿ,ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಇದೀಗ ಮತ್ತೆ ಸಫಾರಿ ಆರಂಭಕ್ಕೆ ಅನುಮತಿ ನೀಡಿದೆ. ರೈತ ಸಂಘಟನೆಗಳು, ಇತರ ಜನಪರಸಂಘಟನೆಗಳು, ಸ್ಥಳೀಯರು, ಪರಿಸರವಾದಿಗಳು, ಸೇವ್ ಕಬಿನಿ ತಂಡದ ಪದಾಧಿಕಾರಿಗಳ ಹೋರಾಟ, ವಿರೋಧದ ನಡುವೆಯೂ ಸಫಾರಿ ಆರಂಭಕ್ಕೆ ಅನುಮತಿಸಿರುವುದು ಖಂಡನೀಯ. ರೆಸಾರ್ಟ್ಗಳಿಂದ ಉಂಟಾಗುವ ಜನಜಂಗುಳಿ, ಮಾನವ ಚಟುವಟಿಕೆಗಳಿಂದ ವನ್ಯ ಪ್ರಾಣಿಗಳ ನೆಮ್ಮದಿಗೆ ಭಂಗ ಉಂಟು ಮಾಡಲು ಪ್ರೇರೇಪಣೆ ನೀಡಿರುವುದು ಸರ್ಕಾರದ ಬೇಜವಾಬ್ದಾರಿತನದ ಪರಮಾವಧಿಯಾಗಿದೆ. ಮತ್ತೆ ರೈತರ ಮೇಲೆ ವನ್ಯ ಪ್ರಾಣಿಗಳ ದಾಳಿ ನಡೆದರೆ ಇದಕ್ಕೆ ಸರ್ಕಾರ ದೊಡ್ಡ ಬೆಲೆ ತೆರಬೇಕಾಗುತ್ತದೆ.
– ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ. ತಾಲ್ಲೂಕು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…