ಓದುಗರ ಪತ್ರ
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ ಕಾರಣವಾಗಿದೆ. ಆದರೆ ಕೆಲ ದಿನಗಳ ಹಿಂದೆ ಹುಲಿ ದಾಳಿಯಿಂದ ಮೂವರು ಮೃತಪಟ್ಟು,ಮತ್ತೊಬ್ಬರು ಎರಡು ಕಣ್ಣುಗಳನ್ನೂ ಕಳೆದುಕೊಂಡಿದ್ದಾರೆ. ಕಾಡು ಪ್ರಾಣಿಗಳ ದಾಳಿಯಿಂದ ತಾಲ್ಲೂಕಿನ ಗ್ರಾಮೀಣ ಭಾಗದ ರೈತರ ಸಾಕು ಪ್ರಾಣಿಗಳ ಜೀವಹಾನಿಯೂ ಆಗಿದೆ. ಕಬಿನಿ ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಕ್ರಮ ರೆಸಾರ್ಟ್ಗಳಲ್ಲಿ ನಡೆಯುವ ಪ್ರವಾಸಿಗರ ಮಿತಿ ಮೀರಿದ ಚಟುವಟಿಕೆಗಳಿಂದ ಕಾಡು ಪ್ರಾಣಿಗಳು, ಹುಲಿಗಳು,ಆನೆಗಳು ನಾಡಿನತ್ತ ಮುಖ ಮಾಡಿ ಪ್ರಾಣ ಹಾನಿ,ಬೆಳೆ ಹಾನಿ ಉಂಟು ಮಾಡುತ್ತಿವೆ. ಅಕ್ರಮ ರೆಸಾರ್ಟ್ಗಳ ವಿರುದ್ಧ ರೈತರು ಮತ್ತು ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ೨-೩ತಿಂಗಳುಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿಯನ್ನು ಸ್ಥಗಿತಗೊಳಿಸಿತ್ತು. ಆದರೆ ಪಟ್ಟಭದ್ರರ ಹಿತಾಸಕ್ತಿ,ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಇದೀಗ ಮತ್ತೆ ಸಫಾರಿ ಆರಂಭಕ್ಕೆ ಅನುಮತಿ ನೀಡಿದೆ. ರೈತ ಸಂಘಟನೆಗಳು, ಇತರ ಜನಪರಸಂಘಟನೆಗಳು, ಸ್ಥಳೀಯರು, ಪರಿಸರವಾದಿಗಳು, ಸೇವ್ ಕಬಿನಿ ತಂಡದ ಪದಾಧಿಕಾರಿಗಳ ಹೋರಾಟ, ವಿರೋಧದ ನಡುವೆಯೂ ಸಫಾರಿ ಆರಂಭಕ್ಕೆ ಅನುಮತಿಸಿರುವುದು ಖಂಡನೀಯ. ರೆಸಾರ್ಟ್ಗಳಿಂದ ಉಂಟಾಗುವ ಜನಜಂಗುಳಿ, ಮಾನವ ಚಟುವಟಿಕೆಗಳಿಂದ ವನ್ಯ ಪ್ರಾಣಿಗಳ ನೆಮ್ಮದಿಗೆ ಭಂಗ ಉಂಟು ಮಾಡಲು ಪ್ರೇರೇಪಣೆ ನೀಡಿರುವುದು ಸರ್ಕಾರದ ಬೇಜವಾಬ್ದಾರಿತನದ ಪರಮಾವಧಿಯಾಗಿದೆ. ಮತ್ತೆ ರೈತರ ಮೇಲೆ ವನ್ಯ ಪ್ರಾಣಿಗಳ ದಾಳಿ ನಡೆದರೆ ಇದಕ್ಕೆ ಸರ್ಕಾರ ದೊಡ್ಡ ಬೆಲೆ ತೆರಬೇಕಾಗುತ್ತದೆ.
– ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ. ತಾಲ್ಲೂಕು
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…