ಓದುಗರ ಪತ್ರ
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ ಕಾರಣವಾಗಿದೆ. ಆದರೆ ಕೆಲ ದಿನಗಳ ಹಿಂದೆ ಹುಲಿ ದಾಳಿಯಿಂದ ಮೂವರು ಮೃತಪಟ್ಟು,ಮತ್ತೊಬ್ಬರು ಎರಡು ಕಣ್ಣುಗಳನ್ನೂ ಕಳೆದುಕೊಂಡಿದ್ದಾರೆ. ಕಾಡು ಪ್ರಾಣಿಗಳ ದಾಳಿಯಿಂದ ತಾಲ್ಲೂಕಿನ ಗ್ರಾಮೀಣ ಭಾಗದ ರೈತರ ಸಾಕು ಪ್ರಾಣಿಗಳ ಜೀವಹಾನಿಯೂ ಆಗಿದೆ. ಕಬಿನಿ ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಕ್ರಮ ರೆಸಾರ್ಟ್ಗಳಲ್ಲಿ ನಡೆಯುವ ಪ್ರವಾಸಿಗರ ಮಿತಿ ಮೀರಿದ ಚಟುವಟಿಕೆಗಳಿಂದ ಕಾಡು ಪ್ರಾಣಿಗಳು, ಹುಲಿಗಳು,ಆನೆಗಳು ನಾಡಿನತ್ತ ಮುಖ ಮಾಡಿ ಪ್ರಾಣ ಹಾನಿ,ಬೆಳೆ ಹಾನಿ ಉಂಟು ಮಾಡುತ್ತಿವೆ. ಅಕ್ರಮ ರೆಸಾರ್ಟ್ಗಳ ವಿರುದ್ಧ ರೈತರು ಮತ್ತು ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ೨-೩ತಿಂಗಳುಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿಯನ್ನು ಸ್ಥಗಿತಗೊಳಿಸಿತ್ತು. ಆದರೆ ಪಟ್ಟಭದ್ರರ ಹಿತಾಸಕ್ತಿ,ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಇದೀಗ ಮತ್ತೆ ಸಫಾರಿ ಆರಂಭಕ್ಕೆ ಅನುಮತಿ ನೀಡಿದೆ. ರೈತ ಸಂಘಟನೆಗಳು, ಇತರ ಜನಪರಸಂಘಟನೆಗಳು, ಸ್ಥಳೀಯರು, ಪರಿಸರವಾದಿಗಳು, ಸೇವ್ ಕಬಿನಿ ತಂಡದ ಪದಾಧಿಕಾರಿಗಳ ಹೋರಾಟ, ವಿರೋಧದ ನಡುವೆಯೂ ಸಫಾರಿ ಆರಂಭಕ್ಕೆ ಅನುಮತಿಸಿರುವುದು ಖಂಡನೀಯ. ರೆಸಾರ್ಟ್ಗಳಿಂದ ಉಂಟಾಗುವ ಜನಜಂಗುಳಿ, ಮಾನವ ಚಟುವಟಿಕೆಗಳಿಂದ ವನ್ಯ ಪ್ರಾಣಿಗಳ ನೆಮ್ಮದಿಗೆ ಭಂಗ ಉಂಟು ಮಾಡಲು ಪ್ರೇರೇಪಣೆ ನೀಡಿರುವುದು ಸರ್ಕಾರದ ಬೇಜವಾಬ್ದಾರಿತನದ ಪರಮಾವಧಿಯಾಗಿದೆ. ಮತ್ತೆ ರೈತರ ಮೇಲೆ ವನ್ಯ ಪ್ರಾಣಿಗಳ ದಾಳಿ ನಡೆದರೆ ಇದಕ್ಕೆ ಸರ್ಕಾರ ದೊಡ್ಡ ಬೆಲೆ ತೆರಬೇಕಾಗುತ್ತದೆ.
– ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ. ತಾಲ್ಲೂಕು
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…