Andolana originals

ಓದುಗರ ಪತ್ರ: ಕೋಟ್ಯಂತರ ಭಾರತೀಯರ ಹೃದಯ ಗೆದ್ದ ಫೋಗಟ್

ಚಿನ್ನದ ಪದಕ ಗೆಲ್ಲುವ ಗುರಿಯಿತ್ತು, ಶ್ರಮವೂ ಇತ್ತು, ಕೋಟ್ಯಂತರ ಭಾರತೀಯರ ಭರವಸೆಯೂ ಆಕೆಯ ಮೇಲಿತ್ತು. ಇನ್ನೇನು ಗೆಲ್ಲಲು ಒಂದೇ ಮೆಟ್ಟಿಲು ಬಾಕಿ ಇದೆ ಎನ್ನುವಷ್ಟರಲ್ಲೇ ಭಾರತೀಯರಿಗೆ ಆಘಾತ ಎದುರಾಯಿತು.

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಭರವಸೆಯೊಂದಿಗೆ 50 ಕೆ.ಜಿ. ಕುಸ್ತಿ ವಿಭಾಗದಲ್ಲಿ ವಿಶ್ವ ಚಾಂಪಿಯನ್‌ ಅನ್ನು ಮಣಿಸಿ ಫೈನಲ್ ತಲುಪಿದ್ದ ವಿನೇಶ್ ಫೋಗಟ್ ಫೈನಲ್‌ಗೂ ಮುನ್ನ ನಡೆದ ತೂಕದ ಪರೀಕ್ಷೆಯಲ್ಲಿ 50 ಕೆ.ಜಿ.ಗಿಂತ 100 ಗ್ರಾಂ ಹೆಚ್ಚಾಗಿದೆ ಎಂಬ ಕಾರಣದಿಂದಾಗಿ ಒಲಿಂಪಿಕ್ಸ್ ನಿಯಮಾವಳಿಗಳ ಪ್ರಕಾರ ಅನರ್ಹಗೊಂಡಿದ್ದಾರೆ. ಇದು ಕೋಟ್ಯಂತರ ಭಾರತೀಯರಿಗೆ ದೊಡ್ಡ ಆಘಾತ ನೀಡಿದೆ.

ಮಾನಸಿಕವಾಗಿ ಸಾಕಷ್ಟು ಕುಗ್ಗಿದ್ದ ವಿನೇಶ್ ಫೋಗಟ್ ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದೇ ಒಂದು ದೊಡ್ಡ ಸವಾಲು. ಇದರ ನಡುವೆ ಆಕೆ ಫೈನಲ್ ತಲುಪಿ, ಕುಸ್ತಿಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಫೈನಲ್‌ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನ ಗೆದ್ದು ಬರುತ್ತಾರೆ ಎಂಬುದು ಭಾರತೀಯರ ಭರವಸೆಯಾಗಿತ್ತು.

ಆಕೆಯ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲು ಕೇವಲ 100 ಗ್ರಾಂ ತೂಕದ ಅಂತರ ಮುಳ್ಳಾಗಿದೆ. ಆಕೆಗೆ ಚಿನ್ನ ಗೆಲ್ಲುವ ಅವಕಾಶ ಕೈತಪ್ಪಿರಬಹುದು. ಆದರೆ, ಸೆಮಿಫೈನಲ್‌ನಲ್ಲಿ ವಿಶ್ವ ಚಾಂಪಿಯನ್ ಯುಯಿ ಸುಸಾಕಿಯನ್ನು ಮಣಿಸಿಫೈನಲ್ ತಲುಪುವ ಮೂಲಕವಿನೇಶ್ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದಾರೆ.

-ಎನ್.ಆರ್.ಚೇತನ್, ಮೈಸೂರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

12 mins ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

9 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

9 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

10 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

12 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

12 hours ago