ಚಿನ್ನದ ಪದಕ ಗೆಲ್ಲುವ ಗುರಿಯಿತ್ತು, ಶ್ರಮವೂ ಇತ್ತು, ಕೋಟ್ಯಂತರ ಭಾರತೀಯರ ಭರವಸೆಯೂ ಆಕೆಯ ಮೇಲಿತ್ತು. ಇನ್ನೇನು ಗೆಲ್ಲಲು ಒಂದೇ ಮೆಟ್ಟಿಲು ಬಾಕಿ ಇದೆ ಎನ್ನುವಷ್ಟರಲ್ಲೇ ಭಾರತೀಯರಿಗೆ ಆಘಾತ ಎದುರಾಯಿತು.
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನ ಗೆಲ್ಲುವ ಭರವಸೆಯೊಂದಿಗೆ 50 ಕೆ.ಜಿ. ಕುಸ್ತಿ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಅನ್ನು ಮಣಿಸಿ ಫೈನಲ್ ತಲುಪಿದ್ದ ವಿನೇಶ್ ಫೋಗಟ್ ಫೈನಲ್ಗೂ ಮುನ್ನ ನಡೆದ ತೂಕದ ಪರೀಕ್ಷೆಯಲ್ಲಿ 50 ಕೆ.ಜಿ.ಗಿಂತ 100 ಗ್ರಾಂ ಹೆಚ್ಚಾಗಿದೆ ಎಂಬ ಕಾರಣದಿಂದಾಗಿ ಒಲಿಂಪಿಕ್ಸ್ ನಿಯಮಾವಳಿಗಳ ಪ್ರಕಾರ ಅನರ್ಹಗೊಂಡಿದ್ದಾರೆ. ಇದು ಕೋಟ್ಯಂತರ ಭಾರತೀಯರಿಗೆ ದೊಡ್ಡ ಆಘಾತ ನೀಡಿದೆ.
ಮಾನಸಿಕವಾಗಿ ಸಾಕಷ್ಟು ಕುಗ್ಗಿದ್ದ ವಿನೇಶ್ ಫೋಗಟ್ ಒಲಿಂಪಿಕ್ಸ್ಗೆ ಆಯ್ಕೆಯಾಗಿದ್ದೇ ಒಂದು ದೊಡ್ಡ ಸವಾಲು. ಇದರ ನಡುವೆ ಆಕೆ ಫೈನಲ್ ತಲುಪಿ, ಕುಸ್ತಿಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಫೈನಲ್ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನ ಗೆದ್ದು ಬರುತ್ತಾರೆ ಎಂಬುದು ಭಾರತೀಯರ ಭರವಸೆಯಾಗಿತ್ತು.
ಆಕೆಯ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲು ಕೇವಲ 100 ಗ್ರಾಂ ತೂಕದ ಅಂತರ ಮುಳ್ಳಾಗಿದೆ. ಆಕೆಗೆ ಚಿನ್ನ ಗೆಲ್ಲುವ ಅವಕಾಶ ಕೈತಪ್ಪಿರಬಹುದು. ಆದರೆ, ಸೆಮಿಫೈನಲ್ನಲ್ಲಿ ವಿಶ್ವ ಚಾಂಪಿಯನ್ ಯುಯಿ ಸುಸಾಕಿಯನ್ನು ಮಣಿಸಿಫೈನಲ್ ತಲುಪುವ ಮೂಲಕವಿನೇಶ್ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದಾರೆ.
-ಎನ್.ಆರ್.ಚೇತನ್, ಮೈಸೂರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…