Andolana originals

ಓದುಗರ ಪತ್ರ: ಕೋಟ್ಯಂತರ ಭಾರತೀಯರ ಹೃದಯ ಗೆದ್ದ ಫೋಗಟ್

ಚಿನ್ನದ ಪದಕ ಗೆಲ್ಲುವ ಗುರಿಯಿತ್ತು, ಶ್ರಮವೂ ಇತ್ತು, ಕೋಟ್ಯಂತರ ಭಾರತೀಯರ ಭರವಸೆಯೂ ಆಕೆಯ ಮೇಲಿತ್ತು. ಇನ್ನೇನು ಗೆಲ್ಲಲು ಒಂದೇ ಮೆಟ್ಟಿಲು ಬಾಕಿ ಇದೆ ಎನ್ನುವಷ್ಟರಲ್ಲೇ ಭಾರತೀಯರಿಗೆ ಆಘಾತ ಎದುರಾಯಿತು.

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಭರವಸೆಯೊಂದಿಗೆ 50 ಕೆ.ಜಿ. ಕುಸ್ತಿ ವಿಭಾಗದಲ್ಲಿ ವಿಶ್ವ ಚಾಂಪಿಯನ್‌ ಅನ್ನು ಮಣಿಸಿ ಫೈನಲ್ ತಲುಪಿದ್ದ ವಿನೇಶ್ ಫೋಗಟ್ ಫೈನಲ್‌ಗೂ ಮುನ್ನ ನಡೆದ ತೂಕದ ಪರೀಕ್ಷೆಯಲ್ಲಿ 50 ಕೆ.ಜಿ.ಗಿಂತ 100 ಗ್ರಾಂ ಹೆಚ್ಚಾಗಿದೆ ಎಂಬ ಕಾರಣದಿಂದಾಗಿ ಒಲಿಂಪಿಕ್ಸ್ ನಿಯಮಾವಳಿಗಳ ಪ್ರಕಾರ ಅನರ್ಹಗೊಂಡಿದ್ದಾರೆ. ಇದು ಕೋಟ್ಯಂತರ ಭಾರತೀಯರಿಗೆ ದೊಡ್ಡ ಆಘಾತ ನೀಡಿದೆ.

ಮಾನಸಿಕವಾಗಿ ಸಾಕಷ್ಟು ಕುಗ್ಗಿದ್ದ ವಿನೇಶ್ ಫೋಗಟ್ ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದೇ ಒಂದು ದೊಡ್ಡ ಸವಾಲು. ಇದರ ನಡುವೆ ಆಕೆ ಫೈನಲ್ ತಲುಪಿ, ಕುಸ್ತಿಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಫೈನಲ್‌ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನ ಗೆದ್ದು ಬರುತ್ತಾರೆ ಎಂಬುದು ಭಾರತೀಯರ ಭರವಸೆಯಾಗಿತ್ತು.

ಆಕೆಯ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲು ಕೇವಲ 100 ಗ್ರಾಂ ತೂಕದ ಅಂತರ ಮುಳ್ಳಾಗಿದೆ. ಆಕೆಗೆ ಚಿನ್ನ ಗೆಲ್ಲುವ ಅವಕಾಶ ಕೈತಪ್ಪಿರಬಹುದು. ಆದರೆ, ಸೆಮಿಫೈನಲ್‌ನಲ್ಲಿ ವಿಶ್ವ ಚಾಂಪಿಯನ್ ಯುಯಿ ಸುಸಾಕಿಯನ್ನು ಮಣಿಸಿಫೈನಲ್ ತಲುಪುವ ಮೂಲಕವಿನೇಶ್ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದಾರೆ.

-ಎನ್.ಆರ್.ಚೇತನ್, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

8 mins ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

27 mins ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

46 mins ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

2 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

2 hours ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago