ಚಿನ್ನದ ಪದಕ ಗೆಲ್ಲುವ ಗುರಿಯಿತ್ತು, ಶ್ರಮವೂ ಇತ್ತು, ಕೋಟ್ಯಂತರ ಭಾರತೀಯರ ಭರವಸೆಯೂ ಆಕೆಯ ಮೇಲಿತ್ತು. ಇನ್ನೇನು ಗೆಲ್ಲಲು ಒಂದೇ ಮೆಟ್ಟಿಲು ಬಾಕಿ ಇದೆ ಎನ್ನುವಷ್ಟರಲ್ಲೇ ಭಾರತೀಯರಿಗೆ ಆಘಾತ ಎದುರಾಯಿತು.
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನ ಗೆಲ್ಲುವ ಭರವಸೆಯೊಂದಿಗೆ 50 ಕೆ.ಜಿ. ಕುಸ್ತಿ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಅನ್ನು ಮಣಿಸಿ ಫೈನಲ್ ತಲುಪಿದ್ದ ವಿನೇಶ್ ಫೋಗಟ್ ಫೈನಲ್ಗೂ ಮುನ್ನ ನಡೆದ ತೂಕದ ಪರೀಕ್ಷೆಯಲ್ಲಿ 50 ಕೆ.ಜಿ.ಗಿಂತ 100 ಗ್ರಾಂ ಹೆಚ್ಚಾಗಿದೆ ಎಂಬ ಕಾರಣದಿಂದಾಗಿ ಒಲಿಂಪಿಕ್ಸ್ ನಿಯಮಾವಳಿಗಳ ಪ್ರಕಾರ ಅನರ್ಹಗೊಂಡಿದ್ದಾರೆ. ಇದು ಕೋಟ್ಯಂತರ ಭಾರತೀಯರಿಗೆ ದೊಡ್ಡ ಆಘಾತ ನೀಡಿದೆ.
ಮಾನಸಿಕವಾಗಿ ಸಾಕಷ್ಟು ಕುಗ್ಗಿದ್ದ ವಿನೇಶ್ ಫೋಗಟ್ ಒಲಿಂಪಿಕ್ಸ್ಗೆ ಆಯ್ಕೆಯಾಗಿದ್ದೇ ಒಂದು ದೊಡ್ಡ ಸವಾಲು. ಇದರ ನಡುವೆ ಆಕೆ ಫೈನಲ್ ತಲುಪಿ, ಕುಸ್ತಿಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಫೈನಲ್ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನ ಗೆದ್ದು ಬರುತ್ತಾರೆ ಎಂಬುದು ಭಾರತೀಯರ ಭರವಸೆಯಾಗಿತ್ತು.
ಆಕೆಯ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲು ಕೇವಲ 100 ಗ್ರಾಂ ತೂಕದ ಅಂತರ ಮುಳ್ಳಾಗಿದೆ. ಆಕೆಗೆ ಚಿನ್ನ ಗೆಲ್ಲುವ ಅವಕಾಶ ಕೈತಪ್ಪಿರಬಹುದು. ಆದರೆ, ಸೆಮಿಫೈನಲ್ನಲ್ಲಿ ವಿಶ್ವ ಚಾಂಪಿಯನ್ ಯುಯಿ ಸುಸಾಕಿಯನ್ನು ಮಣಿಸಿಫೈನಲ್ ತಲುಪುವ ಮೂಲಕವಿನೇಶ್ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದಾರೆ.
-ಎನ್.ಆರ್.ಚೇತನ್, ಮೈಸೂರು.
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…