Andolana originals

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ ಕಡಿದ ಎಲ್ಲ ೪೦ ಮರಗಳಿಗೆ ಬದಲಾಗಿ, ಈಗ ಗಿಡಗಳನ್ನು ನೆಟ್ಟರೆ ೫ ವರ್ಷದೊಳಗೆ ೧೨ ಅಡಿ ಬೆಳೆಯುತ್ತವೆ ಎಂದು ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಪರಿಸರ ಪ್ರೇಮಿಗಳಿಗೆ ಭರವಸೆ ನೀಡಿದ್ದುದು ಸರಿಯಷ್ಟೇ. ಆದರೆ ಇದುವರೆಗೂ ಒಂದೂ ಗಿಡವನ್ನು ನೆಡದೆ ಇರುವುದು ಸೋಜಿಗವೇ ಸರಿ. ಇದನ್ನು ಗಮನಿಸಿದ ಹಸಿರು ಪ್ರೇಮಿಗಳಾದ ರಘುಲಾಲ್ ಅಂಡ್ ಕಂಪೆನಿಯವರು ರಸ್ತೆಗಳ ಇಕ್ಕೆಲಗಳಲ್ಲಿ ಗಿಡಗಳನ್ನು ನೆಟ್ಟು, ರಕ್ಷಣೆ ಮಾಡಿ, ನೀರು ಹಾಕಿ ಎರಡು ತಿಂಗಳುಗಳಿಂದ ಪೋಷಿಸುತ್ತಿದ್ದ ಗಿಡಗಳನ್ನು ಪುಟ್‌ಪಾತ್ ನಿರ್ಮಾಣ ಮಾಡಲು ಪಾಲಿಕೆಯವರು ಕಿತ್ತೆಸೆದಿರುವುದು ವಿಪರ್ಯಾಸವೇ ಸರಿ.

ಹೈದರಾಲಿ ರಸ್ತೆ ಈಗ ಜೋಡಿರಸ್ತೆಯಾಗಿ ಕಂಗೊಳಿಸುತ್ತಿದ್ದು, ನಗರ ಪಾಲಿಕೆ ಅಧಿಕಾರಿಗಳು ಪರಿಸರ ಪ್ರೇಮಿಗಳಿಗೆ ಗಿಡಗಳನ್ನು ನೆಡುವ ಭರವಸೆಯನ್ನು ನೀಡಿದ್ದುದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಅದರಂತೆ ಈಗ ಗಿಡಗಳನ್ನು ನೆಟ್ಟು ಪಾಲಿಕೆ ನಂಬಿಕೆಯನ್ನು ಉಳಿಸಿಕೊಳ್ಳುವುದು ಒಳಿತು.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

4 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

5 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

5 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

10 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

13 hours ago