ಓದುಗರ ಪತ್ರ
ಪ್ರತಿ ವರ್ಷ ಜೂನ್ ೫ರಂದು ವಿಶ್ವ ಪರಿಸರ ದಿನಾಚರಣೆ ನಿಮಿತ್ತ ರಾಜ್ಯದ ಹಲವು ಶಾಲಾ- ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳು ಸೇರಿದಂತೆ ವಿವಿಧೆಡೆ ಸಸಿಗಳನ್ನು ನೆಟ್ಟು ನೀರೆರೆಯುತ್ತಾರೆ. ಪರಿಸರ ದಿನದಂದು ಸಸಿಗಳನ್ನು ನೆಟ್ಟು ಅವುಗಳ ಜೊತೆ ಫೋಟೋ, ಸೆಲ್ಛಿ ತೆಗೆಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವುಗಳನ್ನು ಹರಿಯ ಬಿಡುವುದು ಸರಿಯಷ್ಟೆ. ಆದರೆ ಕೇವಲ ಸೆಲ್ಛಿ ಹಾಗೂ ಫೋಟೋಗೋಸ್ಕರ ಸಸಿಗಳನ್ನು ನೆಡುವ, ಪ್ರಚಾರ ಪಡೆಯುವ ಗೀಳು ಹಲವರಲ್ಲಿದೆ. ಕೆಲವರು ಗಿಡ ನೆಟ್ಟು ಮಾರನೆಯ ದಿನವೇ ಅದನ್ನು ಮರೆತು ಬಿಡುತ್ತಾರೆ. ಗಿಡ ನೆಡುವುದು ಕೇವಲ ಪರಿಸರ ದಿನಾಚರಣೆಗಷ್ಟೇ ಸೀಮಿತವಾಗದೆ,ನೆಟ್ಟ ಗಿಡಕ್ಕೆ ಒಂದಷ್ಟು ತಿಂಗಳುಗಳು ನೀರೆರೆದು ಕಾಪಾಡುವ ಜವಾಬ್ದಾರಿಯನ್ನು ನಿರಂತರವಾಗಿ ಮಾಡಿದರೆ ಪರಿಸರ ದಿನದಂದು ಗಿಡ ನೆಡುವುದಕ್ಕೆ ಅರ್ಥವಿರುತ್ತದೆ. ಗಿಡ ನೆಡುವ ಸಂಭ್ರಮದಲ್ಲಿ ಇದ್ದ ಹುಮ್ಮಸ್ಸನ್ನು ಗಿಡಗಳ ಬೆಳವಣಿಗೆಯಲ್ಲೂ ತೋರಿದರೆ ಪರಿಸರ ದಿನಾಚರಣೆ ಸಾರ್ಥಕವಾಗುತ್ತದೆ.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…