Andolana originals

ಓದುಗರ ಪತ್ರ: ಗಿಡ ನೆಟ್ಟರಷ್ಟೆ ಸಾಲದು ಪೋಷಣೆ ಮಾಡಬೇಕು

ಪ್ರತಿ ವರ್ಷ ಜೂನ್ ೫ರಂದು ವಿಶ್ವ ಪರಿಸರ ದಿನಾಚರಣೆ ನಿಮಿತ್ತ ರಾಜ್ಯದ ಹಲವು ಶಾಲಾ- ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳು ಸೇರಿದಂತೆ ವಿವಿಧೆಡೆ ಸಸಿಗಳನ್ನು ನೆಟ್ಟು ನೀರೆರೆಯುತ್ತಾರೆ. ಪರಿಸರ ದಿನದಂದು ಸಸಿಗಳನ್ನು ನೆಟ್ಟು ಅವುಗಳ ಜೊತೆ ಫೋಟೋ, ಸೆಲ್ಛಿ ತೆಗೆಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವುಗಳನ್ನು ಹರಿಯ ಬಿಡುವುದು ಸರಿಯಷ್ಟೆ. ಆದರೆ ಕೇವಲ ಸೆಲ್ಛಿ ಹಾಗೂ ಫೋಟೋಗೋಸ್ಕರ ಸಸಿಗಳನ್ನು ನೆಡುವ, ಪ್ರಚಾರ ಪಡೆಯುವ ಗೀಳು ಹಲವರಲ್ಲಿದೆ. ಕೆಲವರು ಗಿಡ ನೆಟ್ಟು ಮಾರನೆಯ ದಿನವೇ ಅದನ್ನು ಮರೆತು ಬಿಡುತ್ತಾರೆ. ಗಿಡ ನೆಡುವುದು ಕೇವಲ ಪರಿಸರ ದಿನಾಚರಣೆಗಷ್ಟೇ ಸೀಮಿತವಾಗದೆ,ನೆಟ್ಟ ಗಿಡಕ್ಕೆ ಒಂದಷ್ಟು ತಿಂಗಳುಗಳು ನೀರೆರೆದು ಕಾಪಾಡುವ ಜವಾಬ್ದಾರಿಯನ್ನು ನಿರಂತರವಾಗಿ ಮಾಡಿದರೆ ಪರಿಸರ ದಿನದಂದು ಗಿಡ ನೆಡುವುದಕ್ಕೆ ಅರ್ಥವಿರುತ್ತದೆ. ಗಿಡ ನೆಡುವ ಸಂಭ್ರಮದಲ್ಲಿ ಇದ್ದ ಹುಮ್ಮಸ್ಸನ್ನು ಗಿಡಗಳ ಬೆಳವಣಿಗೆಯಲ್ಲೂ ತೋರಿದರೆ ಪರಿಸರ ದಿನಾಚರಣೆ ಸಾರ್ಥಕವಾಗುತ್ತದೆ.

ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

1 hour ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

2 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

5 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

5 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

8 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

8 hours ago