Andolana originals

ಓದುಗರ ಪತ್ರ: ಗಿಡ ನೆಟ್ಟರಷ್ಟೆ ಸಾಲದು ಪೋಷಣೆ ಮಾಡಬೇಕು

ಪ್ರತಿ ವರ್ಷ ಜೂನ್ ೫ರಂದು ವಿಶ್ವ ಪರಿಸರ ದಿನಾಚರಣೆ ನಿಮಿತ್ತ ರಾಜ್ಯದ ಹಲವು ಶಾಲಾ- ಕಾಲೇಜುಗಳು, ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳು ಸೇರಿದಂತೆ ವಿವಿಧೆಡೆ ಸಸಿಗಳನ್ನು ನೆಟ್ಟು ನೀರೆರೆಯುತ್ತಾರೆ. ಪರಿಸರ ದಿನದಂದು ಸಸಿಗಳನ್ನು ನೆಟ್ಟು ಅವುಗಳ ಜೊತೆ ಫೋಟೋ, ಸೆಲ್ಛಿ ತೆಗೆಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವುಗಳನ್ನು ಹರಿಯ ಬಿಡುವುದು ಸರಿಯಷ್ಟೆ. ಆದರೆ ಕೇವಲ ಸೆಲ್ಛಿ ಹಾಗೂ ಫೋಟೋಗೋಸ್ಕರ ಸಸಿಗಳನ್ನು ನೆಡುವ, ಪ್ರಚಾರ ಪಡೆಯುವ ಗೀಳು ಹಲವರಲ್ಲಿದೆ. ಕೆಲವರು ಗಿಡ ನೆಟ್ಟು ಮಾರನೆಯ ದಿನವೇ ಅದನ್ನು ಮರೆತು ಬಿಡುತ್ತಾರೆ. ಗಿಡ ನೆಡುವುದು ಕೇವಲ ಪರಿಸರ ದಿನಾಚರಣೆಗಷ್ಟೇ ಸೀಮಿತವಾಗದೆ,ನೆಟ್ಟ ಗಿಡಕ್ಕೆ ಒಂದಷ್ಟು ತಿಂಗಳುಗಳು ನೀರೆರೆದು ಕಾಪಾಡುವ ಜವಾಬ್ದಾರಿಯನ್ನು ನಿರಂತರವಾಗಿ ಮಾಡಿದರೆ ಪರಿಸರ ದಿನದಂದು ಗಿಡ ನೆಡುವುದಕ್ಕೆ ಅರ್ಥವಿರುತ್ತದೆ. ಗಿಡ ನೆಡುವ ಸಂಭ್ರಮದಲ್ಲಿ ಇದ್ದ ಹುಮ್ಮಸ್ಸನ್ನು ಗಿಡಗಳ ಬೆಳವಣಿಗೆಯಲ್ಲೂ ತೋರಿದರೆ ಪರಿಸರ ದಿನಾಚರಣೆ ಸಾರ್ಥಕವಾಗುತ್ತದೆ.

ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

16 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago