ಗ್ರಾಹಕರಿಗೆ ಹೊರೆಯಾಗದಂತೆ ದರ ಏರಿಕೆ ಮಾಡುತ್ತಿದ್ದೇವೆ ಎನ್ನುತ್ತಾ ಸರ್ಕಾರ ಹಾಲಿನ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿದೆ.
ಕರ್ನಾಟಕ ಹಾಲು ಮಂಡಳಿಯು ಕೆಲ ತಿಂಗಳ ಹಿಂದಷ್ಟೇ ಪ್ರತಿ ಅರ್ಧ ಲೀಟರ್ ಹಾಲಿನ ಪ್ಯಾಕೆಟ್ನಲ್ಲಿ ೫೦ ಮಿಲಿ ಹೆಚ್ಚುವರಿ ಹಾಲನ್ನು ನೀಡುವುದಾಗಿ ಹೇಳಿ ಪ್ರತಿ ಹಾಲಿನ ಪ್ಯಾಕೇಟ್ ಮೇಲೆ ೨ ರೂ. ಏರಿಕೆ ಮಾಡಿತ್ತು. ಈಗ ಪ್ರತಿ ಲೀಟರ್ ಹಾಲಿಗೆ ೫ ರೂ. ಏರಿಕೆ ಮಾಡಲು ಮುಂದಾಗಿದ್ದು, ಹೆಚ್ಚುವರಿಯಾಗಿ ನೀಡಿದ್ದ ಹಾಲಿನ ಪ್ರಮಾಣವನ್ನೂ ಇಳಿಸಲಾಗುವುದು ಎಂದಿದೆ.
ನಮಗೆ ಹಾಲು ಮಂಡಳಿಯು ಹಾಲಿನ ಪ್ರಮಾಣವನ್ನು ಇಳಿಸುವುದರಲ್ಲಿ ಯಾವುದೇ ತಕರಾರು ಇಲ್ಲ. ಆದರೆ, ಬೆಲೆ ಏರಿಕೆ ಮಾಡುತ್ತಿರುವುದು ಗ್ರಾಹಕರನ್ನು ಚಿಂತೆಗೀಡು ಮಾಡಿದೆ. ಈ ಹಿಂದೆ ಇದ್ದ ೨ ರೂ.ಗಳನ್ನು ಒಳಗೊಂಡಂತೆ ೫ ರೂ. ಏರಿಕೆಯಾಗುತ್ತಿದೆಯೋ ಅಥವಾ ೨ ರೂ.ಗಳಲ್ಲದೆ ಹೆಚ್ಚುವರಿಯಾಗಿ ೫ ರೂ. ಏರಿಕೆಯಾಗುತ್ತಿದೆಯೇ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು.
೨ ರೂ.ಗಳೊಂದಿಗೆ ಮತ್ತೆ ಹೊಸದಾಗಿ ೫ ರೂ. ಏರಿಕೆಯಾದರೆ, ಒಟ್ಟು ೭ ರೂ. ಏರಿಕೆಯಾದಂತಾಗುತ್ತದೆ. ಈ ಬಗ್ಗೆ ಕರ್ನಾಟಕ ಹಾಲು ಮಹಾಮಂಡಳಿ ಸ್ಪಷ್ಟನೆ ನೀಡಬೇಕು. ಅಲ್ಲದೇ ಪ್ರತಿ ಜಿಲ್ಲಾ ಹಾಲು ಒಕ್ಕೂಟವು ಹಾಲಿನ ಉಪ ಉತ್ಪನ್ನಗಳಾದ ಮೊಸರು, ಲಸ್ಸಿ, ಮಜ್ಜಿಗೆ, ಪೇಡ, ಮೈಸೂರು ಪಾಕ್, ಇತ್ಯಾದಿಗಳ ಮೇಲೆ ತನ್ನಿಚ್ಚೆಯಂತೆ ದರ ಏರಿಕೆ ಮಾಡುತ್ತಿವೆ. ಇವುಗಳ ಬಗ್ಗೆಯೂ ಸ್ಪಷ್ಟನೆ ನೀಡುವುದು ಅಗತ್ಯ.
-ವಿಜಯ್ ಹೆಮ್ಮಿಗೆ, ಮೈಸೂರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…