Andolana originals

ಓದುಗರ ಪತ್ರ: ನದಿಗಳ ಸ್ವಚ್ಛತೆ ಕಾಪಾಡಿ

ರಾಜ್ಯದ ಕಾವೇರಿ, ಕಪಿಲ, ತುಂಗಭದ್ರಾ, ಕೃಷ್ಣೆ, ಗೋದಾವರಿ ನದಿಗಳ ಪಕ್ಕದಲ್ಲೇ ಅನೇಕ ತೀರ್ಥಕ್ಷೇತ್ರಗಳಿವೆ. ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರು ಈ ನದಿಗಳಲ್ಲಿ ಸ್ನಾನ ಮಾಡಿ ಅಥವಾ ಕೈ-ಕಾಲುಗಳನ್ನು ಸ್ವಚ್ಛಗೊಳಿಸಿಕೊಂಡು ದೇವಾಲಯಗಳಿಗೆ ಹೋಗುವ ಪದ್ಧತಿ ಇದೆ. ಇನ್ನು ಕೆಲವರು ದಂಡೆಯ ಮೇಲೆ ನದಿಗೆ ಪೂಜೆ ಸಲ್ಲಿಸುತ್ತಾರೆ. ಈ ವೇಳೆ ಪೂಜೆ ಸಾಮಗ್ರಿಗಳನ್ನು ತರುವ ಪ್ಲಾಸ್ಟಿಕ್ ಕವರ್, ಗಂಧದಗಡ್ಡಿ, ಕರ್ಪೂರ, ಅರಿಶಿನ, ಕುಂಕುಮ ಸೇರಿದಂತೆ ಅನೇಕ ತ್ಯಾಜ್ಯಗಳನ್ನು ನದಿಗೆ ಬೀಸಾಡುತ್ತಿದ್ದು, ನದಿಗಳು ಕಲುಷಿತವಾಗುತ್ತಿವೆ.

ಇದು ಒಂದೆಡೆಯಾದರೆ, ಮತ್ತೊಂದೆಡೆ, ನದಿಯ ದಂಡೆಯ ಮೇಲೆಯೇ ಮಲ ಮೂತ್ರ ವಿಸರ್ಜನೆ ಮಾಡುತ್ತಿದ್ದು, ನದಿಯ ಅಂಚಿನಲ್ಲಿ ಮದ್ಯದ ಕೂಟಗಳನ್ನು ಮಾಡಿ ಬಾಟಲಿ, ಪ್ಲಾಸ್ಟಿಕ್ ಕವರ್‌ಗಳನ್ನು ಅಲ್ಲಿಯೇ ಬೀಸಾಡಿ ಹೋಗುತ್ತಿದ್ದಾರೆ. ಇದೂ ಕೂಡ ನದಿಗಳು ಕಲುಷಿತಗೊಳ್ಳಲು ಕಾರಣವಾಗಿದೆ. ಇಂತಹ ಕಲುಷಿತ ನದಿಗಳಲ್ಲಿ ದೇವಾಲಯಕ್ಕೆ ಬರುವ ಭಕ್ತರು ಸ್ನಾನ ಮಾಡುವುದರಿಂದ ಅವರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದೆ. ಅಲ್ಲದೆ ಜಲಚರಗಳಿಗೂ ಹಾನಿಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ತೀರ್ಥಕ್ಷೇತ್ರಗಳ ಸ್ಥಳಗಳಲ್ಲಿ ಹಾಗೂ ನದಿಗಳ ಅಂಚಿನಲ್ಲಿ ಸ್ವಚ್ಛತೆ ಕಾಪಾಡಬೇಕಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.

andolana

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

43 mins ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

1 hour ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

1 hour ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

2 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

2 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

2 hours ago