ರಾಜ್ಯದ ಕಾವೇರಿ, ಕಪಿಲ, ತುಂಗಭದ್ರಾ, ಕೃಷ್ಣೆ, ಗೋದಾವರಿ ನದಿಗಳ ಪಕ್ಕದಲ್ಲೇ ಅನೇಕ ತೀರ್ಥಕ್ಷೇತ್ರಗಳಿವೆ. ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರು ಈ ನದಿಗಳಲ್ಲಿ ಸ್ನಾನ ಮಾಡಿ ಅಥವಾ ಕೈ-ಕಾಲುಗಳನ್ನು ಸ್ವಚ್ಛಗೊಳಿಸಿಕೊಂಡು ದೇವಾಲಯಗಳಿಗೆ ಹೋಗುವ ಪದ್ಧತಿ ಇದೆ. ಇನ್ನು ಕೆಲವರು ದಂಡೆಯ ಮೇಲೆ ನದಿಗೆ ಪೂಜೆ ಸಲ್ಲಿಸುತ್ತಾರೆ. ಈ ವೇಳೆ ಪೂಜೆ ಸಾಮಗ್ರಿಗಳನ್ನು ತರುವ ಪ್ಲಾಸ್ಟಿಕ್ ಕವರ್, ಗಂಧದಗಡ್ಡಿ, ಕರ್ಪೂರ, ಅರಿಶಿನ, ಕುಂಕುಮ ಸೇರಿದಂತೆ ಅನೇಕ ತ್ಯಾಜ್ಯಗಳನ್ನು ನದಿಗೆ ಬೀಸಾಡುತ್ತಿದ್ದು, ನದಿಗಳು ಕಲುಷಿತವಾಗುತ್ತಿವೆ.
ಇದು ಒಂದೆಡೆಯಾದರೆ, ಮತ್ತೊಂದೆಡೆ, ನದಿಯ ದಂಡೆಯ ಮೇಲೆಯೇ ಮಲ ಮೂತ್ರ ವಿಸರ್ಜನೆ ಮಾಡುತ್ತಿದ್ದು, ನದಿಯ ಅಂಚಿನಲ್ಲಿ ಮದ್ಯದ ಕೂಟಗಳನ್ನು ಮಾಡಿ ಬಾಟಲಿ, ಪ್ಲಾಸ್ಟಿಕ್ ಕವರ್ಗಳನ್ನು ಅಲ್ಲಿಯೇ ಬೀಸಾಡಿ ಹೋಗುತ್ತಿದ್ದಾರೆ. ಇದೂ ಕೂಡ ನದಿಗಳು ಕಲುಷಿತಗೊಳ್ಳಲು ಕಾರಣವಾಗಿದೆ. ಇಂತಹ ಕಲುಷಿತ ನದಿಗಳಲ್ಲಿ ದೇವಾಲಯಕ್ಕೆ ಬರುವ ಭಕ್ತರು ಸ್ನಾನ ಮಾಡುವುದರಿಂದ ಅವರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದೆ. ಅಲ್ಲದೆ ಜಲಚರಗಳಿಗೂ ಹಾನಿಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ತೀರ್ಥಕ್ಷೇತ್ರಗಳ ಸ್ಥಳಗಳಲ್ಲಿ ಹಾಗೂ ನದಿಗಳ ಅಂಚಿನಲ್ಲಿ ಸ್ವಚ್ಛತೆ ಕಾಪಾಡಬೇಕಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…