Andolana originals

ಓದುಗರ ಪತ್ರ: ನದಿಗಳ ಸ್ವಚ್ಛತೆ ಕಾಪಾಡಿ

ರಾಜ್ಯದ ಕಾವೇರಿ, ಕಪಿಲ, ತುಂಗಭದ್ರಾ, ಕೃಷ್ಣೆ, ಗೋದಾವರಿ ನದಿಗಳ ಪಕ್ಕದಲ್ಲೇ ಅನೇಕ ತೀರ್ಥಕ್ಷೇತ್ರಗಳಿವೆ. ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರು ಈ ನದಿಗಳಲ್ಲಿ ಸ್ನಾನ ಮಾಡಿ ಅಥವಾ ಕೈ-ಕಾಲುಗಳನ್ನು ಸ್ವಚ್ಛಗೊಳಿಸಿಕೊಂಡು ದೇವಾಲಯಗಳಿಗೆ ಹೋಗುವ ಪದ್ಧತಿ ಇದೆ. ಇನ್ನು ಕೆಲವರು ದಂಡೆಯ ಮೇಲೆ ನದಿಗೆ ಪೂಜೆ ಸಲ್ಲಿಸುತ್ತಾರೆ. ಈ ವೇಳೆ ಪೂಜೆ ಸಾಮಗ್ರಿಗಳನ್ನು ತರುವ ಪ್ಲಾಸ್ಟಿಕ್ ಕವರ್, ಗಂಧದಗಡ್ಡಿ, ಕರ್ಪೂರ, ಅರಿಶಿನ, ಕುಂಕುಮ ಸೇರಿದಂತೆ ಅನೇಕ ತ್ಯಾಜ್ಯಗಳನ್ನು ನದಿಗೆ ಬೀಸಾಡುತ್ತಿದ್ದು, ನದಿಗಳು ಕಲುಷಿತವಾಗುತ್ತಿವೆ.

ಇದು ಒಂದೆಡೆಯಾದರೆ, ಮತ್ತೊಂದೆಡೆ, ನದಿಯ ದಂಡೆಯ ಮೇಲೆಯೇ ಮಲ ಮೂತ್ರ ವಿಸರ್ಜನೆ ಮಾಡುತ್ತಿದ್ದು, ನದಿಯ ಅಂಚಿನಲ್ಲಿ ಮದ್ಯದ ಕೂಟಗಳನ್ನು ಮಾಡಿ ಬಾಟಲಿ, ಪ್ಲಾಸ್ಟಿಕ್ ಕವರ್‌ಗಳನ್ನು ಅಲ್ಲಿಯೇ ಬೀಸಾಡಿ ಹೋಗುತ್ತಿದ್ದಾರೆ. ಇದೂ ಕೂಡ ನದಿಗಳು ಕಲುಷಿತಗೊಳ್ಳಲು ಕಾರಣವಾಗಿದೆ. ಇಂತಹ ಕಲುಷಿತ ನದಿಗಳಲ್ಲಿ ದೇವಾಲಯಕ್ಕೆ ಬರುವ ಭಕ್ತರು ಸ್ನಾನ ಮಾಡುವುದರಿಂದ ಅವರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದೆ. ಅಲ್ಲದೆ ಜಲಚರಗಳಿಗೂ ಹಾನಿಯಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ತೀರ್ಥಕ್ಷೇತ್ರಗಳ ಸ್ಥಳಗಳಲ್ಲಿ ಹಾಗೂ ನದಿಗಳ ಅಂಚಿನಲ್ಲಿ ಸ್ವಚ್ಛತೆ ಕಾಪಾಡಬೇಕಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

3 hours ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

14 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

14 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

15 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

15 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

15 hours ago