ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ, ಹಿರಿಯ ಪೊಲೀಸ್ ಅಧಿಕಾರಿಗಳೇ ನಗುತ್ತಾ, ಹಾಸ್ಯ ಮಾಡುತ್ತಾ, ಈ ಗಂಭೀರ ಪ್ರಕರಣವನ್ನು ಪತ್ರಕರ್ತರ ಮುಂದೆ ವಿವರಿಸುತ್ತಿದ್ದುದು ದೃಶ್ಯ ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಹೆಣ್ಣು ಮಕ್ಕಳಿಲ್ಲವೇ? ಅಕ್ಕ- ತಂಗಿಯರಿಲ್ಲವೇ? ಅತ್ಯಾಚಾರ ನಡೆದು ಕೊಲೆ ಆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೇ ಗಹಗಹಿಸಿ ನಗುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವ ಘಟನೆ. ಇದರಲ್ಲಿ ಒಬ್ಬ ಮಹಿಳಾ ಪೊಲೀಸ್ ಅಧಿಕಾರಿಯೂ ಇರುವುದು ನಾಚಿಕೆಗೆಗೇಡಿನ ಸಂಗತಿ. ಸಮಾಜಕ್ಕೆ ಮಾದರಿಯಾಗಬೇಕಾದ ಹಿರಿಯ ಪೊಲೀಸ್ ಅಧಿಕಾರಿಗಳೇ ಈ ರೀತಿ ವರ್ತಿಸಿದರೆ, ಇನ್ನು ಇವರ ಕೆಳಗಿನ ಅಧಿಕಾರಿಗಳು ಹೇಗೆ ವರ್ತಿಸುತ್ತಾರೆ? ಇಂತಹ ಅಧಿಕಾರಿಗಳಿಂದ ಸಾಮಾನ್ಯ ನಾಗರಿಕರು ರಕ್ಷಣೆ ನಿರೀಕ್ಷಿಸಲು ಸಾಧ್ಯವೇ? ವಿಷಯದ ಗಂಭೀರತೆಯನ್ನು ಮರೆಯುವ ಇಂತಹ ಅಧಿಕಾರಗಳ ವಿರುದ್ಧ ಆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…