Andolana originals

ಓದುಗರ ಪತ್ರ | ನಾಗಮಂಗಲ ಘಟನೆಯಿಂದ ಪೊಲೀಸರು ಎಚ್ಚೆತ್ತುಕೊಳ್ಳಬೇಕಿದೆ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲುಷಿತ ಕೇಕ್ ಸೇವಿಸಿ ಮಗುವೊಂದು ಅಸ್ವಸ್ಥಗೊಂಡಿರುವ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಬೇಕರಿ, ಹೋಟೆಲ್‌ಗಳಲ್ಲಿ ಶುಚಿತ್ವ ಕಾಪಾಡದಿರುವುದು ಇಂತಹ ಪ್ರಕರಣಗಳು ನಡೆಯಲು ಮುಖ್ಯವಾದ ಕಾರಣ. ಹಾಗೆಯೇ, ಪೋಷಕರು ಕೂಡ ಎಂತಹ ಅಂಗಡಿ ಅಥವಾ ಬೇಕರಿಗಳಿಂದ ತಿನಿಸನ್ನು ಖರೀದಿಸಬೇಕು ಎಂಬುದನ್ನು ಸರಿಯಾಗಿ ನಿರ್ಧಾರ ಮಾಡಬೇಕು ಎಂಬುದಕ್ಕೆ ಈ ಪ್ರಕರಣ ಎಚ್ಚರಿಕೆಯಾಗಿದೆ.

ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಅಂಗಡಿ, ಮಳಿಗೆಗಳಲ್ಲಿ ನೈರ್ಮಲ್ಯ, ಶುದ್ಧ ಕುಡಿಯುವ ನೀರು ಇತ್ಯಾದಿ ವಿಚಾರವಾಗಿ ಆಗಾಗ್ಗೆ ತಪಾಸಣೆ ನಡೆಸಬೇಕು. ಈ ಪ್ರಕರಣ ದಲ್ಲಿ ಮಗುವಿನ ಜೀವಕ್ಕೆ ಹಾನಿಯಾಗಿಲ್ಲ. ಆದರೆ, ಮುಂದೆ ಪರಿಸ್ಥಿತಿ ಬದಲಾಗದೇ ಇದೇ ರೀತಿಯಲ್ಲಿ ಮುಂದುವರಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಮುಂದೊಂದು ದಿನ ಇಂತಹ ಗಂಡಾಂತರ ನಮ್ಮ ಮನೆಯ ಮಗುವಿಗೆ ಅಥವಾ ಕುಟುಂಬದವರಿಗೆ ಎದುರಾದರೆ ಗತಿಯೇನು ಎಂಬುದಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಚಿಂತಿಸಿ, ಸೂಕ್ತ ಕ್ರಮಕೈಗೊಳ್ಳಬೇಕು.

-ಆರ್. ವಿ. ಸದಾಶಿವ, ಸರಸ್ವತಿಪುರಂ, ಮೈಸೂರು

ಆಂದೋಲನ ಡೆಸ್ಕ್

Recent Posts

ನಾಳೆ, ನಾಡಿದ್ದು ದಿನಪೂರ್ತಿ ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…

19 mins ago

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…

41 mins ago

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ : ಸುವರ್ಣಸೌಧ ಮುತ್ತಿಗೆ ಯತ್ನ ; ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…

47 mins ago

ಆಂದೋಲನ ವರದಿ ಫಲಶ್ರುತಿ : ಪಚ್ಚೆದೊಡ್ಡಿ ಗ್ರಾಮದ ಶಾಲೆ ಮಕ್ಕಳಿಗೆ ವಾಹನ ಸೌಲಭ್ಯ

ಡಿಸಿ ಶಿಲ್ಪಾನಾಗ್‌ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…

1 hour ago

ನಾನೇ ವಿಪಕ್ಷ ನಾಯಕ ಎಂದ ಯತ್ನಾಳ್

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…

1 hour ago

ಬಿಳಿಗಿರಿ ರಂಗನಬೆಟ್ಟ ಅಭಿವೃದ್ಧಿ ಕಾರ್ಯ ಪರಿಶೀಲನೆಯಲ್ಲಿದೆ : ಸಚಿವ .ಎಚ್.ಕೆ.ಪಾಟೀಲ್‌

ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…

2 hours ago