ಓದುಗರ ಪತ್ರ
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲುಷಿತ ಕೇಕ್ ಸೇವಿಸಿ ಮಗುವೊಂದು ಅಸ್ವಸ್ಥಗೊಂಡಿರುವ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಬೇಕರಿ, ಹೋಟೆಲ್ಗಳಲ್ಲಿ ಶುಚಿತ್ವ ಕಾಪಾಡದಿರುವುದು ಇಂತಹ ಪ್ರಕರಣಗಳು ನಡೆಯಲು ಮುಖ್ಯವಾದ ಕಾರಣ. ಹಾಗೆಯೇ, ಪೋಷಕರು ಕೂಡ ಎಂತಹ ಅಂಗಡಿ ಅಥವಾ ಬೇಕರಿಗಳಿಂದ ತಿನಿಸನ್ನು ಖರೀದಿಸಬೇಕು ಎಂಬುದನ್ನು ಸರಿಯಾಗಿ ನಿರ್ಧಾರ ಮಾಡಬೇಕು ಎಂಬುದಕ್ಕೆ ಈ ಪ್ರಕರಣ ಎಚ್ಚರಿಕೆಯಾಗಿದೆ.
ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಅಂಗಡಿ, ಮಳಿಗೆಗಳಲ್ಲಿ ನೈರ್ಮಲ್ಯ, ಶುದ್ಧ ಕುಡಿಯುವ ನೀರು ಇತ್ಯಾದಿ ವಿಚಾರವಾಗಿ ಆಗಾಗ್ಗೆ ತಪಾಸಣೆ ನಡೆಸಬೇಕು. ಈ ಪ್ರಕರಣ ದಲ್ಲಿ ಮಗುವಿನ ಜೀವಕ್ಕೆ ಹಾನಿಯಾಗಿಲ್ಲ. ಆದರೆ, ಮುಂದೆ ಪರಿಸ್ಥಿತಿ ಬದಲಾಗದೇ ಇದೇ ರೀತಿಯಲ್ಲಿ ಮುಂದುವರಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಮುಂದೊಂದು ದಿನ ಇಂತಹ ಗಂಡಾಂತರ ನಮ್ಮ ಮನೆಯ ಮಗುವಿಗೆ ಅಥವಾ ಕುಟುಂಬದವರಿಗೆ ಎದುರಾದರೆ ಗತಿಯೇನು ಎಂಬುದಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಚಿಂತಿಸಿ, ಸೂಕ್ತ ಕ್ರಮಕೈಗೊಳ್ಳಬೇಕು.
-ಆರ್. ವಿ. ಸದಾಶಿವ, ಸರಸ್ವತಿಪುರಂ, ಮೈಸೂರು
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…