ಓದುಗರ ಪತ್ರ
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲುಷಿತ ಕೇಕ್ ಸೇವಿಸಿ ಮಗುವೊಂದು ಅಸ್ವಸ್ಥಗೊಂಡಿರುವ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಬೇಕರಿ, ಹೋಟೆಲ್ಗಳಲ್ಲಿ ಶುಚಿತ್ವ ಕಾಪಾಡದಿರುವುದು ಇಂತಹ ಪ್ರಕರಣಗಳು ನಡೆಯಲು ಮುಖ್ಯವಾದ ಕಾರಣ. ಹಾಗೆಯೇ, ಪೋಷಕರು ಕೂಡ ಎಂತಹ ಅಂಗಡಿ ಅಥವಾ ಬೇಕರಿಗಳಿಂದ ತಿನಿಸನ್ನು ಖರೀದಿಸಬೇಕು ಎಂಬುದನ್ನು ಸರಿಯಾಗಿ ನಿರ್ಧಾರ ಮಾಡಬೇಕು ಎಂಬುದಕ್ಕೆ ಈ ಪ್ರಕರಣ ಎಚ್ಚರಿಕೆಯಾಗಿದೆ.
ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಅಂಗಡಿ, ಮಳಿಗೆಗಳಲ್ಲಿ ನೈರ್ಮಲ್ಯ, ಶುದ್ಧ ಕುಡಿಯುವ ನೀರು ಇತ್ಯಾದಿ ವಿಚಾರವಾಗಿ ಆಗಾಗ್ಗೆ ತಪಾಸಣೆ ನಡೆಸಬೇಕು. ಈ ಪ್ರಕರಣ ದಲ್ಲಿ ಮಗುವಿನ ಜೀವಕ್ಕೆ ಹಾನಿಯಾಗಿಲ್ಲ. ಆದರೆ, ಮುಂದೆ ಪರಿಸ್ಥಿತಿ ಬದಲಾಗದೇ ಇದೇ ರೀತಿಯಲ್ಲಿ ಮುಂದುವರಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಮುಂದೊಂದು ದಿನ ಇಂತಹ ಗಂಡಾಂತರ ನಮ್ಮ ಮನೆಯ ಮಗುವಿಗೆ ಅಥವಾ ಕುಟುಂಬದವರಿಗೆ ಎದುರಾದರೆ ಗತಿಯೇನು ಎಂಬುದಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಚಿಂತಿಸಿ, ಸೂಕ್ತ ಕ್ರಮಕೈಗೊಳ್ಳಬೇಕು.
-ಆರ್. ವಿ. ಸದಾಶಿವ, ಸರಸ್ವತಿಪುರಂ, ಮೈಸೂರು
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…