ಓದುಗರ ಪತ್ರ
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲುಷಿತ ಕೇಕ್ ಸೇವಿಸಿ ಮಗುವೊಂದು ಅಸ್ವಸ್ಥಗೊಂಡಿರುವ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಬೇಕರಿ, ಹೋಟೆಲ್ಗಳಲ್ಲಿ ಶುಚಿತ್ವ ಕಾಪಾಡದಿರುವುದು ಇಂತಹ ಪ್ರಕರಣಗಳು ನಡೆಯಲು ಮುಖ್ಯವಾದ ಕಾರಣ. ಹಾಗೆಯೇ, ಪೋಷಕರು ಕೂಡ ಎಂತಹ ಅಂಗಡಿ ಅಥವಾ ಬೇಕರಿಗಳಿಂದ ತಿನಿಸನ್ನು ಖರೀದಿಸಬೇಕು ಎಂಬುದನ್ನು ಸರಿಯಾಗಿ ನಿರ್ಧಾರ ಮಾಡಬೇಕು ಎಂಬುದಕ್ಕೆ ಈ ಪ್ರಕರಣ ಎಚ್ಚರಿಕೆಯಾಗಿದೆ.
ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಅಂಗಡಿ, ಮಳಿಗೆಗಳಲ್ಲಿ ನೈರ್ಮಲ್ಯ, ಶುದ್ಧ ಕುಡಿಯುವ ನೀರು ಇತ್ಯಾದಿ ವಿಚಾರವಾಗಿ ಆಗಾಗ್ಗೆ ತಪಾಸಣೆ ನಡೆಸಬೇಕು. ಈ ಪ್ರಕರಣ ದಲ್ಲಿ ಮಗುವಿನ ಜೀವಕ್ಕೆ ಹಾನಿಯಾಗಿಲ್ಲ. ಆದರೆ, ಮುಂದೆ ಪರಿಸ್ಥಿತಿ ಬದಲಾಗದೇ ಇದೇ ರೀತಿಯಲ್ಲಿ ಮುಂದುವರಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಮುಂದೊಂದು ದಿನ ಇಂತಹ ಗಂಡಾಂತರ ನಮ್ಮ ಮನೆಯ ಮಗುವಿಗೆ ಅಥವಾ ಕುಟುಂಬದವರಿಗೆ ಎದುರಾದರೆ ಗತಿಯೇನು ಎಂಬುದಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಚಿಂತಿಸಿ, ಸೂಕ್ತ ಕ್ರಮಕೈಗೊಳ್ಳಬೇಕು.
-ಆರ್. ವಿ. ಸದಾಶಿವ, ಸರಸ್ವತಿಪುರಂ, ಮೈಸೂರು
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…