Andolana originals

ಓದುಗರ ಪತ್ರ: ಜನಪ್ರತಿನಿಧಿಗಳು ಸಮಾನತೆಯ ಸಂದೇಶ ಸಾರಲಿ

ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡದೆ ಎಲ್ಲ ವರ್ಗದ ಜನರನ್ನೂ ಸಮಾನವಾಗಿ ಕಾಣಬೇಕು ಎಂಬುದನ್ನು ಇತ್ತೀಚಿನ ಜನಪ್ರತಿನಿಧಿಗಳು ಮರೆತಿದ್ದಾರೇನೋ ಅನಿಸುತ್ತದೆ.

ಆಕಸ್ಮಿಕವಾಗಿ ಕೋಮುಗಲಭೆಗಳು ಸೃಷ್ಟಿಯಾದರೆ ರಾಜಕಾರಣಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಜನರನ್ನು ಪ್ರಚೋದಿಸಿ ಜಾತಿ, ಧರ್ಮದ ಹೆಸರಿನಲ್ಲಿ ಗಲಭೆಗಳನ್ನು ಸೃಷ್ಟಿಸಿ ಅದರಿಂದ ರಾಜಕೀಯ ಲಾಭ ಪಡೆಯುವುದೇ ಕೆಲವು ಜನಪ್ರತಿನಿಧಿಗಳ ಕೆಲಸವಾಗಿ ಹೋಗಿದೆ.

ಭಾರತ ಸರ್ವಧರ್ಮಗಳ ಸಮನ್ವಯ ರಾಷ್ಟ್ರ. ಇಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ ಧರ್ಮೀಯರು ಯಾವುದೇ ಭೇದವಿಲ್ಲದೆ ಸಹೋದರರಂತೆ ಬದುಕುತ್ತಿದ್ದಾರೆ. ‘ವಿವಿಧತೆಯಲ್ಲಿ ಏಕತೆ’ ಸಾಽಸುವ ಮೂಲಕ ಭಾರತ ವಿಶ್ವಕ್ಕೆ ಮಾದರಿಯಾಗಿದೆ. ಇದನ್ನೆಲ್ಲ ಮರತೆ ಜನಪ್ರತಿನಿಽಗಳೆನಿಸಿಕೊಂಡವರು ಜಾತಿ ನಿಂದನೆ ಮಾಡುವುದು, ಕೋಮುಗಲಭೆ ನಡೆದಾಗ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಉದ್ದೇಶ ಪೂರ್ವಕವಾಗಿಯೇ ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನ ಮಾಡುವುದು ಮುಂತಾದ ಕೃತ್ಯಕ್ಕಿಳಿಯುತ್ತಾರೆ. ಆ ಮೂಲಕ ಸಮಾಜದ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಜನಪ್ರತಿನಿಽಗಳು ಇನ್ನಾದರೂ ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡದೇ ಎಲ್ಲ ಧರ್ಮಗಳ ಜನರನ್ನು ಗೌರವಿಸುವ ಮೂಲಕ ಸಮಾನತೆಯ ಸಂದೇಶ ಸಾರುವಂತಾಗಲಿ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

 

andolana

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

2 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

2 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

2 hours ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

2 hours ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

2 hours ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

2 hours ago