Andolana originals

ಓದುಗರ ಪತ್ರ: ಜನಪ್ರತಿನಿಧಿಗಳು ಸಮಾನತೆಯ ಸಂದೇಶ ಸಾರಲಿ

ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡದೆ ಎಲ್ಲ ವರ್ಗದ ಜನರನ್ನೂ ಸಮಾನವಾಗಿ ಕಾಣಬೇಕು ಎಂಬುದನ್ನು ಇತ್ತೀಚಿನ ಜನಪ್ರತಿನಿಧಿಗಳು ಮರೆತಿದ್ದಾರೇನೋ ಅನಿಸುತ್ತದೆ.

ಆಕಸ್ಮಿಕವಾಗಿ ಕೋಮುಗಲಭೆಗಳು ಸೃಷ್ಟಿಯಾದರೆ ರಾಜಕಾರಣಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಜನರನ್ನು ಪ್ರಚೋದಿಸಿ ಜಾತಿ, ಧರ್ಮದ ಹೆಸರಿನಲ್ಲಿ ಗಲಭೆಗಳನ್ನು ಸೃಷ್ಟಿಸಿ ಅದರಿಂದ ರಾಜಕೀಯ ಲಾಭ ಪಡೆಯುವುದೇ ಕೆಲವು ಜನಪ್ರತಿನಿಧಿಗಳ ಕೆಲಸವಾಗಿ ಹೋಗಿದೆ.

ಭಾರತ ಸರ್ವಧರ್ಮಗಳ ಸಮನ್ವಯ ರಾಷ್ಟ್ರ. ಇಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ ಧರ್ಮೀಯರು ಯಾವುದೇ ಭೇದವಿಲ್ಲದೆ ಸಹೋದರರಂತೆ ಬದುಕುತ್ತಿದ್ದಾರೆ. ‘ವಿವಿಧತೆಯಲ್ಲಿ ಏಕತೆ’ ಸಾಽಸುವ ಮೂಲಕ ಭಾರತ ವಿಶ್ವಕ್ಕೆ ಮಾದರಿಯಾಗಿದೆ. ಇದನ್ನೆಲ್ಲ ಮರತೆ ಜನಪ್ರತಿನಿಽಗಳೆನಿಸಿಕೊಂಡವರು ಜಾತಿ ನಿಂದನೆ ಮಾಡುವುದು, ಕೋಮುಗಲಭೆ ನಡೆದಾಗ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಉದ್ದೇಶ ಪೂರ್ವಕವಾಗಿಯೇ ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನ ಮಾಡುವುದು ಮುಂತಾದ ಕೃತ್ಯಕ್ಕಿಳಿಯುತ್ತಾರೆ. ಆ ಮೂಲಕ ಸಮಾಜದ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಜನಪ್ರತಿನಿಽಗಳು ಇನ್ನಾದರೂ ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡದೇ ಎಲ್ಲ ಧರ್ಮಗಳ ಜನರನ್ನು ಗೌರವಿಸುವ ಮೂಲಕ ಸಮಾನತೆಯ ಸಂದೇಶ ಸಾರುವಂತಾಗಲಿ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

 

andolana

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

16 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

17 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

18 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

18 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

19 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

20 hours ago