Andolana originals

ಓದುಗರ ಪತ್ರ: ಜನಪ್ರತಿನಿಧಿಗಳು ಸಮಾನತೆಯ ಸಂದೇಶ ಸಾರಲಿ

ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡದೆ ಎಲ್ಲ ವರ್ಗದ ಜನರನ್ನೂ ಸಮಾನವಾಗಿ ಕಾಣಬೇಕು ಎಂಬುದನ್ನು ಇತ್ತೀಚಿನ ಜನಪ್ರತಿನಿಧಿಗಳು ಮರೆತಿದ್ದಾರೇನೋ ಅನಿಸುತ್ತದೆ.

ಆಕಸ್ಮಿಕವಾಗಿ ಕೋಮುಗಲಭೆಗಳು ಸೃಷ್ಟಿಯಾದರೆ ರಾಜಕಾರಣಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಜನರನ್ನು ಪ್ರಚೋದಿಸಿ ಜಾತಿ, ಧರ್ಮದ ಹೆಸರಿನಲ್ಲಿ ಗಲಭೆಗಳನ್ನು ಸೃಷ್ಟಿಸಿ ಅದರಿಂದ ರಾಜಕೀಯ ಲಾಭ ಪಡೆಯುವುದೇ ಕೆಲವು ಜನಪ್ರತಿನಿಧಿಗಳ ಕೆಲಸವಾಗಿ ಹೋಗಿದೆ.

ಭಾರತ ಸರ್ವಧರ್ಮಗಳ ಸಮನ್ವಯ ರಾಷ್ಟ್ರ. ಇಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ ಧರ್ಮೀಯರು ಯಾವುದೇ ಭೇದವಿಲ್ಲದೆ ಸಹೋದರರಂತೆ ಬದುಕುತ್ತಿದ್ದಾರೆ. ‘ವಿವಿಧತೆಯಲ್ಲಿ ಏಕತೆ’ ಸಾಽಸುವ ಮೂಲಕ ಭಾರತ ವಿಶ್ವಕ್ಕೆ ಮಾದರಿಯಾಗಿದೆ. ಇದನ್ನೆಲ್ಲ ಮರತೆ ಜನಪ್ರತಿನಿಽಗಳೆನಿಸಿಕೊಂಡವರು ಜಾತಿ ನಿಂದನೆ ಮಾಡುವುದು, ಕೋಮುಗಲಭೆ ನಡೆದಾಗ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಉದ್ದೇಶ ಪೂರ್ವಕವಾಗಿಯೇ ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನ ಮಾಡುವುದು ಮುಂತಾದ ಕೃತ್ಯಕ್ಕಿಳಿಯುತ್ತಾರೆ. ಆ ಮೂಲಕ ಸಮಾಜದ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಜನಪ್ರತಿನಿಽಗಳು ಇನ್ನಾದರೂ ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡದೇ ಎಲ್ಲ ಧರ್ಮಗಳ ಜನರನ್ನು ಗೌರವಿಸುವ ಮೂಲಕ ಸಮಾನತೆಯ ಸಂದೇಶ ಸಾರುವಂತಾಗಲಿ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

 

andolana

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 hour ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago