Andolana originals

ಓದುಗರ ಪತ್ರ: ಜನರ ಹಿತ ಮರೆತ ರಾಜಕೀಯ ಪಕ್ಷಗಳು

ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದೆ. ಭಾರತೀಯ ಸೇನಾಪಡೆಯನ್ನು ಬೆಂಬಲಿಸುವ ಉದ್ದೇಶದಿಂದ ರಾಜ್ಯದಲ್ಲಿ ಕಾಂಗ್ರೆಸ್ ತಿರಂಗಾ ಯಾತ್ರೆ ನಡೆಸಿತು. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ಕೂಡ ಈಗ ತಿರಂಗಾಯಾತ್ರೆ ಕೈಗೊಂಡಿದೆ. ಈಗ ಕಾಂಗ್ರೆಸ್ ಜೈ ಹಿಂದ್ ಯಾತ್ರೆ ಕೈಗೊಳ್ಳಲು ಮುಂದಾಗಿದೆ. ಅಮೆರಿಕ ಮಧ್ಯಪ್ರವೇಶ ಹಾಗೂ ರಾಷ್ಟ್ರೀಯ ಭದ್ರತಾ ನಿರ್ವಹಣೆ ಕುರಿತಂತೆ ಕೇಂದ್ರ ಸರ್ಕಾರ ಮೌನವಾಗಿದೆ ಎಂದು ಆರೋಪಿ ಕಾಂಗ್ರೆಸ್ ಈ ಯಾತ್ರೆಗೆ ತಯಾರಿ ನಡೆಸಿದೆ.

ರಾಜ್ಯದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಸ್ವಹಿತಾಸಕ್ತಿಯಿಂದ ಯಾತ್ರೆಗಳ ಪೈಪೋಟಿಗೆ ಇಳಿದಿರುವುದು ಆರೋಗ್ಯಕರ ಬೆಳವಣಿಗೆಯಲ್ಲ.  ಜನರ ಹಿತದೃಷ್ಟಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಬೇಕಾದ ಆಡಳಿತ ಪಕ್ಷ, ಅಧಿಕಾರ ಭದ್ರತೆಗೆ ಆದ್ಯತೆ ನೀಡುತ್ತಿರುವುದು ವಿಪರ್ಯಾಸ.

ವಿಪಕ್ಷ ಕೂಡ ಸರ್ಕಾರದ ಲೋಪಗಳನ್ನು ಸಮರ್ಥವಾಗಿ ಜನರ ಮುಂದೆ  ಇಡುವುದರಲ್ಲಿ ವಿಫಲವಾಗಿದೆ. ಮುಂದೆ ರಾಜ್ಯದಲ್ಲಿ ಅಧಿಕಾರಕ್ಕೇರುವ ಆಸೆಯಿಂದ ಹಾಗೂ ಪಕ್ಷದ ಹೈಕಮಾಂಡ್ ಕೃಪಾಕಟಾಕ್ಷಕ್ಕೆ ಪಾತ್ರವಾಗುವ ಅದಮ್ಯ ಬಯಕೆಯಿಂದ ಪ್ರತಿಭಟನೆ, ಯಾತ್ರೆಯನ್ನು ಮಾಡುತ್ತಿದೆ ಅನಿಸುತ್ತಿದೆ. ಇದೊಂದು ರೀತಿಯಲ್ಲಿ ‘ಅಪ್ಪ-ಅಮ್ಮ’ನ ಜಗಳದಲ್ಲಿ ಕೂಸು ಬಡವಾಯಿತು ಎಂಬಂತಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಸ್ವಹಿತಾಸಕ್ತಿಯಿಂದ ರಾಜ್ಯದ ಜನರು ಹತಾಶರಾಗಿದ್ದಾರೆ.

-ಆರ್.ವಿ.ಶಿವಾನಂದ, ಕನಕದಾಸನಗರ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

5 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

5 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

5 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

5 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

5 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

5 hours ago