ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಟಿಕೆಟ್ಗೆ ಲೋಕಸಭಾ ಮಾಜಿ ಸದಸ್ಯ ಮತ್ತು ಮಾಜಿ ಶಾಸಕರ ಜಗಳ ಮಾಧ್ಯಮಗಳ ಮೂಲಕ ಬೀದಿಗೆ ಬಂದಿದೆ. ಇದು ಇಬ್ಬರಿಗೂ ಗೌರವ ತರುವ ವಿಷಯವಲ್ಲ. ಕಳೆದ ೨೦ ವರ್ಷಗಳ ಕಾಲ ಬಿಜೆಪಿ ವಶದಲ್ಲಿದ್ದ ಈ ಕ್ಷೇತ್ರವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಾಗಿದೆ. ಈ ಕ್ಷೇತ್ರ ಬಿಜೆಪಿಗೆ ಆಶಾದಾಯಕವಾಗಿದೆ ಎಂದು ಭಾವಿಸಿ ಇಬ್ಬರೂ ಮಾಜಿ ಅನುಭವಿ ರಾಜಕಾರಣಿಗಳು ಈಗಲೇ ಈ ಕ್ಷೇತ್ರದ ಟಿಕೆಟ್ ಆಕಾಕ್ಷಿಗಳಾಗಿರುವುದು ಸರಿಯಷ್ಟೆ. ಕ್ಷೇತ್ರದಿಂದ ಸ್ಪರ್ಧಿಸುವವರನ್ನು ಪಕ್ಷದ ವರಿಷ್ಠರೇ ಆಯ್ಕೆ ಮಾಡುತ್ತಾರೆ. ತಮಗೆ ಟಿಕೆಟ್ ನೀಡಬೇಕು ಎಂದು ಪಕ್ಷದ ವರಿಷ್ಠರಿಗೆ ಮನವಿ ಸಲ್ಲಿಸಬೇಕೇ ಹೊರತು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಅವರ ಘನತೆಗೆ ತಕ್ಕುದಲ್ಲ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…
ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…
ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ…
ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…