Andolana originals

ಓದುಗರ ಪತ್ರ: ರಾಜಕಾರಣಿಗಳು ಜವಾಬ್ದಾರಿಯಿಂದ ವರ್ತಿಸಲಿ

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಟಿಕೆಟ್‌ಗೆ ಲೋಕಸಭಾ ಮಾಜಿ ಸದಸ್ಯ ಮತ್ತು ಮಾಜಿ ಶಾಸಕರ ಜಗಳ ಮಾಧ್ಯಮಗಳ ಮೂಲಕ ಬೀದಿಗೆ ಬಂದಿದೆ. ಇದು ಇಬ್ಬರಿಗೂ ಗೌರವ ತರುವ ವಿಷಯವಲ್ಲ. ಕಳೆದ ೨೦ ವರ್ಷಗಳ ಕಾಲ ಬಿಜೆಪಿ ವಶದಲ್ಲಿದ್ದ ಈ ಕ್ಷೇತ್ರವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಾಗಿದೆ. ಈ ಕ್ಷೇತ್ರ ಬಿಜೆಪಿಗೆ ಆಶಾದಾಯಕವಾಗಿದೆ ಎಂದು ಭಾವಿಸಿ ಇಬ್ಬರೂ ಮಾಜಿ ಅನುಭವಿ ರಾಜಕಾರಣಿಗಳು ಈಗಲೇ ಈ ಕ್ಷೇತ್ರದ ಟಿಕೆಟ್ ಆಕಾಕ್ಷಿಗಳಾಗಿರುವುದು ಸರಿಯಷ್ಟೆ. ಕ್ಷೇತ್ರದಿಂದ ಸ್ಪರ್ಧಿಸುವವರನ್ನು ಪಕ್ಷದ ವರಿಷ್ಠರೇ ಆಯ್ಕೆ ಮಾಡುತ್ತಾರೆ. ತಮಗೆ ಟಿಕೆಟ್ ನೀಡಬೇಕು ಎಂದು ಪಕ್ಷದ ವರಿಷ್ಠರಿಗೆ ಮನವಿ ಸಲ್ಲಿಸಬೇಕೇ ಹೊರತು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಅವರ ಘನತೆಗೆ ತಕ್ಕುದಲ್ಲ.

 – ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

5 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

6 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

6 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

7 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

8 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

9 hours ago