Andolana originals

ಓದುಗರ ಪತ್ರ: ರಾಜಕಾರಣಿಗಳು ಜವಾಬ್ದಾರಿಯಿಂದ ವರ್ತಿಸಲಿ

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ ಟಿಕೆಟ್‌ಗೆ ಲೋಕಸಭಾ ಮಾಜಿ ಸದಸ್ಯ ಮತ್ತು ಮಾಜಿ ಶಾಸಕರ ಜಗಳ ಮಾಧ್ಯಮಗಳ ಮೂಲಕ ಬೀದಿಗೆ ಬಂದಿದೆ. ಇದು ಇಬ್ಬರಿಗೂ ಗೌರವ ತರುವ ವಿಷಯವಲ್ಲ. ಕಳೆದ ೨೦ ವರ್ಷಗಳ ಕಾಲ ಬಿಜೆಪಿ ವಶದಲ್ಲಿದ್ದ ಈ ಕ್ಷೇತ್ರವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಾಗಿದೆ. ಈ ಕ್ಷೇತ್ರ ಬಿಜೆಪಿಗೆ ಆಶಾದಾಯಕವಾಗಿದೆ ಎಂದು ಭಾವಿಸಿ ಇಬ್ಬರೂ ಮಾಜಿ ಅನುಭವಿ ರಾಜಕಾರಣಿಗಳು ಈಗಲೇ ಈ ಕ್ಷೇತ್ರದ ಟಿಕೆಟ್ ಆಕಾಕ್ಷಿಗಳಾಗಿರುವುದು ಸರಿಯಷ್ಟೆ. ಕ್ಷೇತ್ರದಿಂದ ಸ್ಪರ್ಧಿಸುವವರನ್ನು ಪಕ್ಷದ ವರಿಷ್ಠರೇ ಆಯ್ಕೆ ಮಾಡುತ್ತಾರೆ. ತಮಗೆ ಟಿಕೆಟ್ ನೀಡಬೇಕು ಎಂದು ಪಕ್ಷದ ವರಿಷ್ಠರಿಗೆ ಮನವಿ ಸಲ್ಲಿಸಬೇಕೇ ಹೊರತು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಅವರ ಘನತೆಗೆ ತಕ್ಕುದಲ್ಲ.

 – ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

23 mins ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

54 mins ago

ಇರುವೆ ಕಚ್ಚಿ ಶಿಶು ಸಾವು ಪ್ರಕರಣ ; ವೈದ್ಯರು ಸೇರಿ 7 ಮಂದಿಗೆ ಶೋಕಾಸ್‌ ನೋಟಿಸ್

ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು…

1 hour ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಗಾಂಧಿ ಆತ್ಮಕತೆಯ ಆಯ್ದ ತುಣುಕು ; ಬಾಲ್ಯ ವಿವಾಹವೆಂಬ ನಾಚಿಕೆಗೇಡಿನ ಸಂಗತಿ

ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ…

1 hour ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಐನ್‌ಸ್ಟೀನ್‌ ಕಂಡಂತೆ ಮಹಾತ್ಮ ಗಾಂಧೀಜಿ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್‌ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…

3 hours ago

ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆಗೆ ಸಮಿತಿ ; ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮ : ಡಿಸಿ ಎಚ್ಚರಿಕೆ

ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…

3 hours ago