ದಸರಾ ಮಹೋತ್ಸವದ ವೇದಿಕೆ ಕಾರ್ಯಕ್ರಮಗಳು ಎಂದರೆ ಅಲ್ಲಿ ಮೈಸೂರು ಸಂಸ್ಥಾನ, ಮಹಾರಾಜರ ಇತಿಹಾಸ, ಮೈಸೂರಿನ ಗತವೈಭವದ ಬಗ್ಗೆ ಪರಿಚಯಿಸುವುದು ಅಗತ್ಯ. ಆದರೆ ಇತ್ತೀಚಿನ ವರ್ಷಗಳಲ್ಲಿ ದಸರಾ ಉದ್ಘಾಟನೆಯ ಕಾರ್ಯಕ್ರಮದಿಂದ ಹಿಡಿದು ಸಮಾರೋಪ ಸಮಾರಂಭದವರೆಗೂ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿಯೂ ರಾಜಕೀಯ ಭಾಷಣಗಳನ್ನು ಮಾಡುತ್ತಾ ದಸರಾದ ಉದ್ದೇಶವನ್ನೇ ರಾಜಕಾರಣಿಗಳು ಮರೆತಿದ್ದಾರೇನೋ ಅನಿಸುತ್ತದೆ. ಈ ಬಾರಿಯ ದಸರಾ ಉದ್ಘಾಟನಾ ಸಮಾರಂಭದಲ್ಲಿಯೂ ಇದೇ ಚಾಳಿ ಮುಂದುವರಿಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ತಮ್ಮ ಭಾಷಣದುದ್ದಕ್ಕೂ ವಿಪಕ್ಷಗಳನ್ನು ಟೀಕಿಸುವುದು, ಅವರಮೇಲೆ ಆರೋಪಗಳನ್ನು ಮಾಡುತ್ತಾ ರಾಜಕೀಯ ಭಾಷಣಗಳನ್ನೇ ಮುಂದುವರಿಸಿದರೆ ವಿನಃ ಯಾರೂ ಕೂಡ ದಸರಾ ಕಾರ್ಯಕ್ರಮಗಳ ಬಗ್ಗೆಯಾಗಲಿ, ಮೈಸೂರಿನ ಬಗ್ಗೆಯಾಗಲಿ, ದಸರಾದ ರೂಪರೇಷೆಯ ಬಗ್ಗೆಯಾಗಲಿ ಮಾತಾಡಲಿಲ್ಲ. ಜನಪ್ರತಿನಿಧಿಗಳಾದವರು ರಾಜಕೀಯ ಪ್ರೇರಿತ ಕಾರ್ಯಕ್ರಮಗಳಲ್ಲಿ ರಾಜಕೀಯದ ಮಾತುಗಳನ್ನಾಡುವುದು ಸೂಕ್ತ. ಆದರೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಎಲ್ಲ ಪಕ್ಷದವರೂ ಭಾಗವಹಿಸುವುದರಿಂದ ವೇದಿಕೆಗಳ ಮೇಲೆ ಪಕ್ಷಾತೀತವಾಗಿ, ರಾಜಕೀಯೇತರ ವಿಚಾರಗಳನ್ನು ಮಾತನಾಡಬೇಕು. ಆದ್ದರಿಂದ ಚುನಾಯಿತ ಪ್ರತಿನಿಧಿಗಳು ದಸರಾ ಕಾರ್ಯಕ್ರಮಗಳ ವೇದಿಕೆಗಳಲ್ಲಿ ರಾಜಕೀಯ ಪ್ರೇರಿತ ಭಾಷಣಗಳನ್ನು ಬಿಡಲಿ.
-ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ,
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…