Andolana originals

ಓದುಗರ ಪತ್ರ: ದಸರಾ ವೇದಿಕೆಗಳಲ್ಲಿ ರಾಜಕೀಯ ಸಲ್ಲದು

ದಸರಾ ಮಹೋತ್ಸವದ ವೇದಿಕೆ ಕಾರ್ಯಕ್ರಮಗಳು ಎಂದರೆ ಅಲ್ಲಿ ಮೈಸೂರು ಸಂಸ್ಥಾನ, ಮಹಾರಾಜರ ಇತಿಹಾಸ, ಮೈಸೂರಿನ ಗತವೈಭವದ ಬಗ್ಗೆ ಪರಿಚಯಿಸುವುದು ಅಗತ್ಯ. ಆದರೆ ಇತ್ತೀಚಿನ ವರ್ಷಗಳಲ್ಲಿ ದಸರಾ ಉದ್ಘಾಟನೆಯ ಕಾರ್ಯಕ್ರಮದಿಂದ ಹಿಡಿದು ಸಮಾರೋಪ ಸಮಾರಂಭದವರೆಗೂ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿಯೂ ರಾಜಕೀಯ ಭಾಷಣಗಳನ್ನು ಮಾಡುತ್ತಾ ದಸರಾದ ಉದ್ದೇಶವನ್ನೇ ರಾಜಕಾರಣಿಗಳು ಮರೆತಿದ್ದಾರೇನೋ ಅನಿಸುತ್ತದೆ. ಈ ಬಾರಿಯ ದಸರಾ ಉದ್ಘಾಟನಾ ಸಮಾರಂಭದಲ್ಲಿಯೂ ಇದೇ ಚಾಳಿ ಮುಂದುವರಿಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ತಮ್ಮ ಭಾಷಣದುದ್ದಕ್ಕೂ ವಿಪಕ್ಷಗಳನ್ನು ಟೀಕಿಸುವುದು, ಅವರಮೇಲೆ ಆರೋಪಗಳನ್ನು ಮಾಡುತ್ತಾ ರಾಜಕೀಯ ಭಾಷಣಗಳನ್ನೇ ಮುಂದುವರಿಸಿದರೆ ವಿನಃ ಯಾರೂ ಕೂಡ ದಸರಾ ಕಾರ್ಯಕ್ರಮಗಳ ಬಗ್ಗೆಯಾಗಲಿ, ಮೈಸೂರಿನ ಬಗ್ಗೆಯಾಗಲಿ, ದಸರಾದ ರೂಪರೇಷೆಯ ಬಗ್ಗೆಯಾಗಲಿ ಮಾತಾಡಲಿಲ್ಲ. ಜನಪ್ರತಿನಿಧಿಗಳಾದವರು ರಾಜಕೀಯ ಪ್ರೇರಿತ ಕಾರ್ಯಕ್ರಮಗಳಲ್ಲಿ ರಾಜಕೀಯದ ಮಾತುಗಳನ್ನಾಡುವುದು ಸೂಕ್ತ. ಆದರೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಎಲ್ಲ ಪಕ್ಷದವರೂ ಭಾಗವಹಿಸುವುದರಿಂದ ವೇದಿಕೆಗಳ ಮೇಲೆ ಪಕ್ಷಾತೀತವಾಗಿ, ರಾಜಕೀಯೇತರ ವಿಚಾರಗಳನ್ನು ಮಾತನಾಡಬೇಕು. ಆದ್ದರಿಂದ ಚುನಾಯಿತ ಪ್ರತಿನಿಧಿಗಳು ದಸರಾ ಕಾರ್ಯಕ್ರಮಗಳ ವೇದಿಕೆಗಳಲ್ಲಿ ರಾಜಕೀಯ ಪ್ರೇರಿತ ಭಾಷಣಗಳನ್ನು ಬಿಡಲಿ.
-ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ,

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

35 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago