ದಸರಾ ಮಹೋತ್ಸವದ ವೇದಿಕೆ ಕಾರ್ಯಕ್ರಮಗಳು ಎಂದರೆ ಅಲ್ಲಿ ಮೈಸೂರು ಸಂಸ್ಥಾನ, ಮಹಾರಾಜರ ಇತಿಹಾಸ, ಮೈಸೂರಿನ ಗತವೈಭವದ ಬಗ್ಗೆ ಪರಿಚಯಿಸುವುದು ಅಗತ್ಯ. ಆದರೆ ಇತ್ತೀಚಿನ ವರ್ಷಗಳಲ್ಲಿ ದಸರಾ ಉದ್ಘಾಟನೆಯ ಕಾರ್ಯಕ್ರಮದಿಂದ ಹಿಡಿದು ಸಮಾರೋಪ ಸಮಾರಂಭದವರೆಗೂ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿಯೂ ರಾಜಕೀಯ ಭಾಷಣಗಳನ್ನು ಮಾಡುತ್ತಾ ದಸರಾದ ಉದ್ದೇಶವನ್ನೇ ರಾಜಕಾರಣಿಗಳು ಮರೆತಿದ್ದಾರೇನೋ ಅನಿಸುತ್ತದೆ. ಈ ಬಾರಿಯ ದಸರಾ ಉದ್ಘಾಟನಾ ಸಮಾರಂಭದಲ್ಲಿಯೂ ಇದೇ ಚಾಳಿ ಮುಂದುವರಿಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ತಮ್ಮ ಭಾಷಣದುದ್ದಕ್ಕೂ ವಿಪಕ್ಷಗಳನ್ನು ಟೀಕಿಸುವುದು, ಅವರಮೇಲೆ ಆರೋಪಗಳನ್ನು ಮಾಡುತ್ತಾ ರಾಜಕೀಯ ಭಾಷಣಗಳನ್ನೇ ಮುಂದುವರಿಸಿದರೆ ವಿನಃ ಯಾರೂ ಕೂಡ ದಸರಾ ಕಾರ್ಯಕ್ರಮಗಳ ಬಗ್ಗೆಯಾಗಲಿ, ಮೈಸೂರಿನ ಬಗ್ಗೆಯಾಗಲಿ, ದಸರಾದ ರೂಪರೇಷೆಯ ಬಗ್ಗೆಯಾಗಲಿ ಮಾತಾಡಲಿಲ್ಲ. ಜನಪ್ರತಿನಿಧಿಗಳಾದವರು ರಾಜಕೀಯ ಪ್ರೇರಿತ ಕಾರ್ಯಕ್ರಮಗಳಲ್ಲಿ ರಾಜಕೀಯದ ಮಾತುಗಳನ್ನಾಡುವುದು ಸೂಕ್ತ. ಆದರೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಎಲ್ಲ ಪಕ್ಷದವರೂ ಭಾಗವಹಿಸುವುದರಿಂದ ವೇದಿಕೆಗಳ ಮೇಲೆ ಪಕ್ಷಾತೀತವಾಗಿ, ರಾಜಕೀಯೇತರ ವಿಚಾರಗಳನ್ನು ಮಾತನಾಡಬೇಕು. ಆದ್ದರಿಂದ ಚುನಾಯಿತ ಪ್ರತಿನಿಧಿಗಳು ದಸರಾ ಕಾರ್ಯಕ್ರಮಗಳ ವೇದಿಕೆಗಳಲ್ಲಿ ರಾಜಕೀಯ ಪ್ರೇರಿತ ಭಾಷಣಗಳನ್ನು ಬಿಡಲಿ.
-ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ,
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…