Andolana originals

ಓದುಗರ ಪತ್ರ: ದಸರಾ ವೇದಿಕೆಗಳಲ್ಲಿ ರಾಜಕೀಯ ಸಲ್ಲದು

ದಸರಾ ಮಹೋತ್ಸವದ ವೇದಿಕೆ ಕಾರ್ಯಕ್ರಮಗಳು ಎಂದರೆ ಅಲ್ಲಿ ಮೈಸೂರು ಸಂಸ್ಥಾನ, ಮಹಾರಾಜರ ಇತಿಹಾಸ, ಮೈಸೂರಿನ ಗತವೈಭವದ ಬಗ್ಗೆ ಪರಿಚಯಿಸುವುದು ಅಗತ್ಯ. ಆದರೆ ಇತ್ತೀಚಿನ ವರ್ಷಗಳಲ್ಲಿ ದಸರಾ ಉದ್ಘಾಟನೆಯ ಕಾರ್ಯಕ್ರಮದಿಂದ ಹಿಡಿದು ಸಮಾರೋಪ ಸಮಾರಂಭದವರೆಗೂ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿಯೂ ರಾಜಕೀಯ ಭಾಷಣಗಳನ್ನು ಮಾಡುತ್ತಾ ದಸರಾದ ಉದ್ದೇಶವನ್ನೇ ರಾಜಕಾರಣಿಗಳು ಮರೆತಿದ್ದಾರೇನೋ ಅನಿಸುತ್ತದೆ. ಈ ಬಾರಿಯ ದಸರಾ ಉದ್ಘಾಟನಾ ಸಮಾರಂಭದಲ್ಲಿಯೂ ಇದೇ ಚಾಳಿ ಮುಂದುವರಿಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ತಮ್ಮ ಭಾಷಣದುದ್ದಕ್ಕೂ ವಿಪಕ್ಷಗಳನ್ನು ಟೀಕಿಸುವುದು, ಅವರಮೇಲೆ ಆರೋಪಗಳನ್ನು ಮಾಡುತ್ತಾ ರಾಜಕೀಯ ಭಾಷಣಗಳನ್ನೇ ಮುಂದುವರಿಸಿದರೆ ವಿನಃ ಯಾರೂ ಕೂಡ ದಸರಾ ಕಾರ್ಯಕ್ರಮಗಳ ಬಗ್ಗೆಯಾಗಲಿ, ಮೈಸೂರಿನ ಬಗ್ಗೆಯಾಗಲಿ, ದಸರಾದ ರೂಪರೇಷೆಯ ಬಗ್ಗೆಯಾಗಲಿ ಮಾತಾಡಲಿಲ್ಲ. ಜನಪ್ರತಿನಿಧಿಗಳಾದವರು ರಾಜಕೀಯ ಪ್ರೇರಿತ ಕಾರ್ಯಕ್ರಮಗಳಲ್ಲಿ ರಾಜಕೀಯದ ಮಾತುಗಳನ್ನಾಡುವುದು ಸೂಕ್ತ. ಆದರೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಎಲ್ಲ ಪಕ್ಷದವರೂ ಭಾಗವಹಿಸುವುದರಿಂದ ವೇದಿಕೆಗಳ ಮೇಲೆ ಪಕ್ಷಾತೀತವಾಗಿ, ರಾಜಕೀಯೇತರ ವಿಚಾರಗಳನ್ನು ಮಾತನಾಡಬೇಕು. ಆದ್ದರಿಂದ ಚುನಾಯಿತ ಪ್ರತಿನಿಧಿಗಳು ದಸರಾ ಕಾರ್ಯಕ್ರಮಗಳ ವೇದಿಕೆಗಳಲ್ಲಿ ರಾಜಕೀಯ ಪ್ರೇರಿತ ಭಾಷಣಗಳನ್ನು ಬಿಡಲಿ.
-ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ,

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago