Andolana originals

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ ಯೋಜನೆಗಳಲ್ಲಿ ತೊಡಗಿಸಿರುವ ಹಣವನ್ನು ಅವಧಿ ಪೂರ್ಣವಾದ ನಂತರ ಹಿಂಪಡೆಯುವ ಯಾವುದೇ ರೀತಿಯ ಚಲನ್‌ಗಳು ಕನ್ನಡದಲ್ಲಿ ದೊರೆಯುವುದಿಲ್ಲ.

ಇದರಿಂದ ಇಂಗ್ಲಿಷ್ ಬಾರದವರು ಚಲನ್ ತುಂಬಲು ಅನ್ಯರನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ. ಚಲನ್‌ನ ಒಂದು ಭಾಗದಲ್ಲಿ ಇಂಗ್ಲಿಷ್ ಹಾಗೂ ಮತ್ತೊಂದು ಭಾಗದಲ್ಲಿ ಹಿಂದಿಯಲ್ಲಿ ಮಾತ್ರ ಮುದ್ರಿತವಾಗಿರುತ್ತವೆ. ನೆರೆಯ ರಾಜ್ಯ ತಮಿಳುನಾಡಿನಲ್ಲಿ ಒಂದು ಭಾಗದಲ್ಲಿ ಇಂಗ್ಲಿಷ್ ಹಾಗೂ ಇನ್ನೊಂದು ಕಡೆ ತಮಿಳು ಭಾಷೆಯಲ್ಲಿ ಚಲನ್ ಮುದ್ರಣವಾಗಿರುತ್ತದೆ. ಆದರೆ ನಮ್ಮ ಕರ್ನಾಟಕದ ಅಂಚೆ ಕಚೇರಿಗಳಲ್ಲಿ ಕನ್ನಡದಲ್ಲಿ ಚಲನ್ ಮುದ್ರಣವಾಗದಿರುವ ಬಗ್ಗೆ ಸ್ಥಳೀಯ ಅಂಚೆ ಕಚೇರಿಗಳ ಸಿಬ್ಬಂದಿಯನ್ನು ಕೇಳಿದರೆ ನೀವು ನಮ್ಮ ಮೇಲಧಿಕಾರಿಗಳಿಗೆ ದೂರು ನೀಡಿ ಎನ್ನುತ್ತಾರೆ. ಮೇಲಧಿಕಾರಿಗಳಿಗೆ ಕೇಳಿದರೆ ಅವರು, ನೀವು ದೆಹಲಿಯಲ್ಲಿರುವ ಪ್ರಧಾನ ಕಚೇರಿಯನ್ನು ಕೇಳಿ ಎನ್ನುತ್ತಾರೆ. ರಾಜ್ಯದ ಎಲ್ಲ ಅಂಚೆ ಕಚೇರಿಗಳಲ್ಲೂ ಕನ್ನಡದಲ್ಲೂ ಚಲನ್ ಮುದ್ರಣವಾಗುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಬಗ್ಗೆ ಗಮನ ಹರಿಸಬೇಕು.

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

4 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

4 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

4 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

4 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

7 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

7 hours ago