ಓದುಗರ ಪತ್ರ
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ ಯೋಜನೆಗಳಲ್ಲಿ ತೊಡಗಿಸಿರುವ ಹಣವನ್ನು ಅವಧಿ ಪೂರ್ಣವಾದ ನಂತರ ಹಿಂಪಡೆಯುವ ಯಾವುದೇ ರೀತಿಯ ಚಲನ್ಗಳು ಕನ್ನಡದಲ್ಲಿ ದೊರೆಯುವುದಿಲ್ಲ.
ಇದರಿಂದ ಇಂಗ್ಲಿಷ್ ಬಾರದವರು ಚಲನ್ ತುಂಬಲು ಅನ್ಯರನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ. ಚಲನ್ನ ಒಂದು ಭಾಗದಲ್ಲಿ ಇಂಗ್ಲಿಷ್ ಹಾಗೂ ಮತ್ತೊಂದು ಭಾಗದಲ್ಲಿ ಹಿಂದಿಯಲ್ಲಿ ಮಾತ್ರ ಮುದ್ರಿತವಾಗಿರುತ್ತವೆ. ನೆರೆಯ ರಾಜ್ಯ ತಮಿಳುನಾಡಿನಲ್ಲಿ ಒಂದು ಭಾಗದಲ್ಲಿ ಇಂಗ್ಲಿಷ್ ಹಾಗೂ ಇನ್ನೊಂದು ಕಡೆ ತಮಿಳು ಭಾಷೆಯಲ್ಲಿ ಚಲನ್ ಮುದ್ರಣವಾಗಿರುತ್ತದೆ. ಆದರೆ ನಮ್ಮ ಕರ್ನಾಟಕದ ಅಂಚೆ ಕಚೇರಿಗಳಲ್ಲಿ ಕನ್ನಡದಲ್ಲಿ ಚಲನ್ ಮುದ್ರಣವಾಗದಿರುವ ಬಗ್ಗೆ ಸ್ಥಳೀಯ ಅಂಚೆ ಕಚೇರಿಗಳ ಸಿಬ್ಬಂದಿಯನ್ನು ಕೇಳಿದರೆ ನೀವು ನಮ್ಮ ಮೇಲಧಿಕಾರಿಗಳಿಗೆ ದೂರು ನೀಡಿ ಎನ್ನುತ್ತಾರೆ. ಮೇಲಧಿಕಾರಿಗಳಿಗೆ ಕೇಳಿದರೆ ಅವರು, ನೀವು ದೆಹಲಿಯಲ್ಲಿರುವ ಪ್ರಧಾನ ಕಚೇರಿಯನ್ನು ಕೇಳಿ ಎನ್ನುತ್ತಾರೆ. ರಾಜ್ಯದ ಎಲ್ಲ ಅಂಚೆ ಕಚೇರಿಗಳಲ್ಲೂ ಕನ್ನಡದಲ್ಲೂ ಚಲನ್ ಮುದ್ರಣವಾಗುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಬಗ್ಗೆ ಗಮನ ಹರಿಸಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…